ಡ್ರೋನ್‌ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಕಾರ್ಯಾಗಾರ

KannadaprabhaNewsNetwork |  
Published : Jul 09, 2025, 12:23 AM ISTUpdated : Jul 09, 2025, 12:24 AM IST
ಸವಣೂರಿನ ಜಮೀನುಗಳಲ್ಲಿ ಡ್ರೋನ್‌ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ ನಡೆಯಿತು. | Kannada Prabha

ಸಾರಾಂಶ

ಮಳೆಯ ಪ್ರಮಾಣ ಕಡಿಮೆಯಾದ ನಂತರ ಅಂತರ ಬೇಸಾಯ ಮತ್ತು ಕಳೆ ತೆಗೆಯುವ ಕೆಲಸವನ್ನು ಕೈಗೊಂಡು ನಂತರ ಗೊಬ್ಬರವಾಗಿ ಶಿಫಾರಸ್ಸಿನಂತೆ ಯೂರಿಯಾ ರಸಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು.

ಸವಣೂರು: ವಿವಿಧ ಬೆಳೆಗಳು ಬೆಳವಣಿಗೆ ಹಂತದಲ್ಲಿವೆ. ಆದ್ದರಿಂದ ರೈತರು ತ್ವರಿತವಾಗಿ ತಮ್ಮ ಹೊಲಗಳಲ್ಲಿ ನಿಂತಿರುವ ನೀರನ್ನು ಬಸಿಗಾಲುವೆಗಳ ಮುಖಾಂತರ ಬಸಿದು ಹೋಗುವಂತೆ ಕ್ರಮ ವಹಿಸುವುದು ಅವಶ್ಯವಾಗಿದೆ ಎಂದು ಉಪ ಕೃಷಿ ನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.ಪಟ್ಟಣದ ರೈತರ ಜಮೀನುಗಳಲ್ಲಿ ಏರ್ಪಡಿಸಿದ್ದ ಡ್ರೋನ್‌ ಮುಖಾಂತರ ನ್ಯಾನೋ ಯೂರಿಯಾ ಬಳಕೆಯ ಕುರಿತು ರೈತರಿಗೆ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.

ಮಳೆಯ ಪ್ರಮಾಣ ಕಡಿಮೆಯಾದ ನಂತರ ಅಂತರ ಬೇಸಾಯ ಮತ್ತು ಕಳೆ ತೆಗೆಯುವ ಕೆಲಸವನ್ನು ಕೈಗೊಂಡು ನಂತರ ಗೊಬ್ಬರವಾಗಿ ಶಿಫಾರಸ್ಸಿನಂತೆ ಯೂರಿಯಾ ರಸಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು. ಯೂರಿಯಾ ರಸಗೊಬ್ಬರ ಬೆಳೆಗಳಿಗೆ ಸಾರಜನಕ ಒದಗಿಸಿ ಉತ್ತಮ ಫಸಲಿಗೆ ನೆರವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರೈತರಾದ ಹಾಜಿ ಬಳ್ಳಾರಿ, ಮೆಹಬೂಬ ಕುರಿ, ಮುತ್ತನಗೌಡ ಹೊಸಮನಿ, ಕೆ. ಪಾಸ್ತ ಕಂಪನಿಯ ಪ್ರತಿನಿಧಿ ಮಂಜುನಾಥ ಭೋವಿ, ಕೃಷಿ ಅಧಿಕಾರಿಗಳಾದ ಹಾಲಸಿದ್ದ ಗಾವಡೆ ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ, ರೈತರು ಇದ್ದರು.ದುಡಿಯಲು ಹೋಗಿದ್ದ ವೃದ್ಧ ಕಾಣೆ

ರಾಣಿಬೆನ್ನೂರು: ದುಡಿಯಲು ಮಂಗಳೂರಿಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋದ ವ್ಯಕ್ತಿಯೊಬ್ಬ ಕಾಣೆಯಾದ ಘಟನೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಜರುಗಿದೆ.ಶಿವಪ್ಪ ಚನ್ನಬಸಪ್ಪ ಹುಲಗಿಹೊಳಿ(65) ಕಾಣೆಯಾದ ವ್ಯಕ್ತಿ. ಈತ 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಸಾದಗಪ್ಪು ಮೈಬಣ್ಣ, ತಲೆಯಲ್ಲಿ ಬಿಳಿ ಕೂದಲುಗಳು, ಬಿಳಿ ಮೀಸೆ ಹೊಂದಿದ್ದಾನೆ. ಕನ್ನಡ ಮಾತ್ರ ಮಾತನಾಡುತ್ತಿದ್ದು, ಓದಲು, ಬರೆಯಲು ಬರುವುದಿಲ್ಲ. ಈತನ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಆರಕ್ಷಕ ಉಪ ನಿರೀಕ್ಷಕರು, ಹಲಗೇರಿ ಪೊಲೀಸ್ ಠಾಣೆ ದೂ. 08373- 252333, ಮೊ. 9480804554 ಸಂಪರ್ಕಿಸಲು ಕೋರಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!