ನಂತೂರು: ಶಂಕರಶ್ರೀ ವಸಂತ ವೇದಪಾಠಶಾಲೆ ಉದ್ಘಾಟನೆ

KannadaprabhaNewsNetwork |  
Published : Apr 19, 2025, 12:42 AM IST
32 | Kannada Prabha

ಸಾರಾಂಶ

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ 2ನೇ ವರ್ಷದ ಶಂಕರಶ್ರೀ ವಸಂತ ವೇದ ಪಾಠ ಶಾಲೆಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕೇಂದ್ರ ಸರಕು ಮತ್ತು ಸೇವಾ ಇಲಾಖೆಯ ಸಹಾಯ ಆಯುಕ್ತ ಮಧುಸೂದನ ಭಟ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ 2ನೇ ವರ್ಷದ ಶಂಕರಶ್ರೀ ವಸಂತ ವೇದ ಪಾಠ ಶಾಲೆಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕೇಂದ್ರ ಸರಕು ಮತ್ತು ಸೇವಾ ಇಲಾಖೆಯ ಸಹಾಯ ಆಯುಕ್ತ ಮಧುಸೂದನ ಭಟ್ ಉದ್ಘಾಟಿಸಿದರು.

ಪುತ್ತೂರು ದ್ವಾರಕಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ, ವೇದ ಪರಂಪರೆ ಜೀವನದಲ್ಲಿ ಅಳವಡಿಸಿಗೊಳ್ಳುವಲ್ಲಿ ನಿತ್ಯಾನುಷ್ಠಾನಕ್ಕೆ ಬೇಕಾದ ಪಾಠಗಳ ಕಲಿತು ಅನುಷ್ಠಾನಗೊಳಿಸಬೇಕು ಎಂದರು

ಸಂಸ್ಥೆಯ ಅಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿದ್ದರು. ಶ್ರೀರಾಮಚಂದ್ರಾಪುರ ಮಠದ ಮಂಗಳೂರು ಹವ್ಯಕ ಮಂಡಲದ ವೈದಿಕ ಪ್ರಧಾನರೂ ಶಿಬಿರದ ಪ್ರಧಾನ ಗುರುಗಳೂ ಆದ ವೇ.ಮೂ.ಶಿವಪ್ರಸಾದ ಭಟ್ಟ ಅಮೈ, ದ.ಕ.ಮತ್ತು ಕಾಸರಗೋಡು ಹವ್ಯಕ ಮಹಾಜನಸಭಾದ ಅಧ್ಯಕ್ಷ ಗಿರೀಶ್ಚಂದ್ರ ಆಲಂಗಾರು, ಮಂಗಳೂರು ಹವ್ಯಕ ಸಭಾ ಅಧ್ಯಕ್ಷರಾದ ಗೀತಾದೇವಿ ಚೂಂತಾರು, ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸೇವಾ ಸಮಿತಿ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಮಂಗಳೂರು ರುದ್ರ ಸಮಿತಿಯ ಸಂಚಾಲಕ ಡಾ.ಬಿ.ರಾಜೇಂದ್ರ ಪ್ರಸಾದ್, ಶ್ರೀ ಭಾರತೀ ಸೌಹಾರ್ದ ಸಹಕಾರಿ ನಿಯಮಿತದ ನಿರ್ದೇಶಕ ಜಿ ಕೆ ಭಟ್ಟ ಸೇರಾಜೆ, ಮಂಗಳೂರು ಉತ್ತರ ವಲಯಾಧ್ಯಕ್ಷ ಡಾ. ಶಿವಶಂಕರ ಭಟ್ ಕೆ, ಮಧ್ಯ ವಲಯಾಧ್ಯಕ್ಷ ಕಬೆಕ್ಕೋಡು ಬಾಲಸುಬ್ರಹ್ಮಣ್ಯ ಭಟ್, ದಕ್ಷಿಣ ವಲಯ ಉಪಾಧ್ಯಕ್ಷ ಸುಬ್ರಹ್ಮಣ್ಯ ಕಾಶಿಮಠ ಉಪಸ್ಥಿತರಿದ್ದರು.

ಮಂಗಳೂರು ಹವ್ಯಕ ಮಂಡಲಾಧ್ಯಕ್ಷ ಉದಯಶಂಕರ್ ನೀರ್ಪಾಜೆ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಸಹಾಯ ಪ್ರಧಾನ ಹೊಸಮನೆ ಭಾಸ್ಕರ ಭಟ್ಟ ವಂದಿಸಿದರು. ಬಳಿಕ ಶಿಬಿರದ ತರಗತಿಗಳು ಆರಂಭಗೊಂಡವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!