ನಾಪೋಕ್ಲು: ಎಕ್ಸೆಲ್ ಶಾಲೆಯಲ್ಲಿ ಮಕ್ಕಳ ಸಂತೆ

KannadaprabhaNewsNetwork |  
Published : Oct 17, 2025, 01:03 AM IST
ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಗುರುವಾರ ಶಾಲಾ ಸಭಾಂಗಣದಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು..    | Kannada Prabha

ಸಾರಾಂಶ

ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಗುರುವಾರ ಶಾಲಾ ಸಭಾಂಗಣದಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು. ಎಕ್ಸೆಲ್ ಶಾಲೆಯ ಸ್ಥಾಪಕಾಧ್ಯಕ್ಷ ಕುಟ್ಟಂಚೆಟ್ಟಿರ ಮಾದಪ್ಪ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿನ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಗುರುವಾರ ಶಾಲಾ ಸಭಾಂಗಣದಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು. ಎಕ್ಸೆಲ್ ಶಾಲೆಯ ಸ್ಥಾಪಕಾಧ್ಯಕ್ಷ ಕುಟ್ಟಂಚೆಟ್ಟಿರ ಮಾದಪ್ಪ ಉದ್ಘಾಟಿಸಿದರು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕಿ ಪ್ರಿಯಾಂಕಾ, ಮಕ್ಕಳ ಕಲಿಕೆಗೆ ಪೂರಕವಾಗಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ವ್ಯವಹಾರ ಜ್ಞಾನ, ಸೃಜನಶೀಲತೆ, ಗಣಿತ ಲೆಕ್ಕಾಚಾರಗಳನ್ನು ಕಲಿತುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ನೇತಾಜಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಸಿ.ಎಸ್. ಸುರೇಶ ಮಾತನಾಡಿ, ಸಂತೆ ಎಂದರೆ ಗದ್ದಲ, ಕಲರವ ಎಲ್ಲ ರೀತಿಯ ವಸ್ತುಗಳು ದೊರಕುವ ಸ್ಥಳ. ಅಂತಹ ಒಂದು ವಾತಾವರಣವನ್ನು ಶಿಕ್ಷಕರಿಂದ ಈ ಶಾಲೆಯಲ್ಲಿ ಆಯೋಜಿಸಿದ್ದು, ಮಕ್ಕಳ ಕಲಿಕೆಗೆ ಪೂರಕವಾಗಿದೆ. ವಿದ್ಯಾರ್ಥಿಗಳು ಸಹಪಠ್ಯ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ವ್ಯವಹಾರ ಜ್ಞಾನ, ಬದುಕುವ ಕಲೆ ವೃದ್ಧಿಸಲಿದೆ ಎಂದು ಹೇಳಿದರು.ಮಕ್ಕಳ ಸಂತೆಯಲ್ಲಿ ಆರರಿಂದ 10ನೇ ತರಗತಿ ವರೆಗಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳು ತರಹೇವಾರಿ ತಿಂಡಿ ತಿನಿಸುಗಳು, ತರಕಾರಿಗಳು, ಹಣ್ಣು ಹಂಪಲುಗಳನ್ನು ಪ್ರದರ್ಶಿಸಿದರು ಮತ್ತು ಮಾರಾಟ ಮಾಡಿದರು.ಶಾಲೆ ನಿರ್ದೇಶಕರಾದ ಶರತ್, ಭವ್ಯ, ವಿದ್ಯಾ ಸುರೇಶ್, ಮುಖ್ಯ ಶಿಕ್ಷಕ ತಮ್ಮಯ್ಯ, ಶಿಕ್ಷಕ ವೃಂದ, ಪೋಷಕರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!