ನಾಪೋಕ್ಲು: ಕಾಫಿ ತೋಟಗಳಲ್ಲಿ ಕಾಡಾನೆ ಸಂಚಾರ

KannadaprabhaNewsNetwork |  
Published : Mar 01, 2025, 01:02 AM IST
ಮರoದೋಡ ಗ್ರಾಮದ ಕಾಫಿ ತೋಟದಲ್ಲಿ ಹಗಲು ಹೊತ್ತಿನಲ್ಲಿ ನಿರ್ಭೀತಿಯಿಂದ ಸಂಚರಿಸಿದ ಕಾಡಾನೆ. | Kannada Prabha

ಸಾರಾಂಶ

ಕುಂಜಿಲ, ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಗ್ರಾಮದ ನೀಡುಮಂಡ ಹರೀಶ್ ಎಂಬವರಿಗೆ ಸೇರಿದ ಕೆರೆ ತಟ್ಟು ಎಂಬಲ್ಲಿಯ ಕಾಫಿ ತೋಟದಲ್ಲಿ ಕಾಡಾನೆ ಸಂಚರಿಸಿದೆ. ಇದರಿಂದಾಗಿ ಫಸಲು ಬರಿತ ಕಾಫಿ ಗಿಡಗಳು ಮುರಿದು ನಷ್ಟ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಮರಂದೋಡ ಗ್ರಾಮದ ಕಾಫಿ ತೋಟದಲ್ಲಿ ಹಗಲು ಹೊತ್ತಿನಲ್ಲಿ ಕಾಡಾನೆಯೊಂದು ಸಂಚರಿಸುತ್ತಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಕುಂಜಿಲ, ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಗ್ರಾಮದ ನೀಡುಮಂಡ ಹರೀಶ್ ಎಂಬವರಿಗೆ ಸೇರಿದ ಕೆರೆ ತಟ್ಟು ಎಂಬಲ್ಲಿಯ ಕಾಫಿ ತೋಟದಲ್ಲಿ ಗುರುವಾರ ಕಾಡಾನೆ ಸಂಚರಿಸಿದೆ. ಇದರಿಂದಾಗಿ ಫಸಲು ಬರಿತ ಕಾಫಿ ಗಿಡಗಳು ಮುರಿದು ನಷ್ಟ ಸಂಭವಿಸಿದೆ. ಈ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆಗಳ ಉಪಟಳದಿಂದಾಗಿ ಕಾಫಿ, ಅಡಕೆ, ಬಾಲೆ, ತೆಂಗು ಸೇರಿದಂತೆ ಮತ್ತಿತರ ಗಿಡಗಳನ್ನು ತಿಂದು, ತುಳಿದು ಧ್ವಂಸಗೊಳಿಸುತ್ತಿವೆ. ಇದೀಗ ಕಾಫಿ ಫಸಲು ಕೊಯ್ಲಿನ ಸಮಯವಾಗಿರುವುದರಿಂದ ಕಾರ್ಮಿಕರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದು, ಬೆಳಗಾರರಿಗೆ ಸಮಸ್ಯೆಯಾಗಿದೆ.

ಕೂಡಲೇ ಕಾಡಾನೆಗಳನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ನಷ್ಟಕ್ಕೆ ಒಳಗಾದ ಬೆಳೆಗಾರರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''