ಕನ್ನಡಪ್ರಭ ವಾರ್ತೆ ನಾಪೋಕ್ಲು
ಬಳಿ ರಸ್ತೆ ಹೊಂಡಗಳಾಗಿದ್ದು ವಾಹನ ಚಾಲಕರು ಸಮಸ್ಯೆ ಎದುರಿಸುವಂತಾಗಿದೆ. ಇಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು ರಸ್ತೆಯಲ್ಲಿ ಹೊಂಡಗಳಾಗಿವೆ. ಮಳೆ ನೀರು ರಸ್ತೆಯಲ್ಲಿ ಸರಾಗವಾಗಿ ಹರಿಯುತ್ತಿರುವುದರಿಂದಗಿ ರಸ್ತೆ ಯಾವುದು, ಗುಂಡಿ ಯಾವುದು ಎಂದು ಗೋಚರಿಸದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಶಾಲಾ ಬಸ್ಗಳ ಸಹಿತ ಇತರ ಇತರ ವಾಹನಗಳು ಒಂದೇ ಬದಿದಲ್ಲಿ ಚಲಿಸುವಂಥಾಗಿ ಸವಾರರು ಸಮಸ್ಯೆ ಎದುರಿಸುತ್ತಿದ್ದಾರೆ. ರಸ್ತೆ ಸರಿಪಡಿಸುವಂತೆ ಈ ಹಿಂದೆ ಮಾಧ್ಯಮಗಳಲ್ಲಿ ವರದಿಗಳೂ ಪ್ರಕಟವಾಗಿದ್ದವು.ಆದರೆ ಯಾವುದೇ ಸ್ಪಂದನೆ ದೊರಕದ ಕಾರಣ ಗುರುವಾರ ಆಟೋ ಚಾಲಕರು ಸ್ವಯಂ ಪ್ರೇರಿತರಾಗಿ ಜಲ್ಲಿ, ಕಲ್ಲುಗಳನ್ನು ತಂದು ರಸ್ತೆಹೊಂಡ ಮುಚ್ಚಿದರು.
----------------------------------
ನಿಂತು ಚಾಲಕರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸೂಕ್ತ ಚರಂಡಿಗಳಿಲ್ಲದೆ ರಸ್ತೆ ಮುಖಾಂತರ ನೀರು ತೋಡಿನಂತೆ ಹರಿಯುತ್ತಿದ್ದು ಹೆಚ್ಚಿನ ಅಪಾಯ ಆಗುವ ಮುನ್ನ ಸಮಸ್ಯೆ ಪರಿಹರಿಸಲು ಸಂಬಂಧಿಸಿದ ಇಲಾಖೆ ಕೂಡಲೆ ಸೂಕ್ತ ಕ್ರಮಕ್ಕೆ ಮುಂದಾಗಬೇಕು .
--------------------------------------
ಹೊರತು ರಸ್ತೆ ಸರಿಪಡಿಸುವ ಗೋಜಿಗೆ ಯಾರು ಮುಂದಾಗುತ್ತಿಲ್ಲ. ನಮ್ಮ ಜೀವನ ಸಾಗಿಸಲು ದುಸ್ತರವಾಗಿದ್ದು ನಾವು ಕೆಲವು ಆಟೋ ಚಾಲಕರು ಮಾತ್ರ ಸೇರಿ ಸ್ವಯಂ ಪ್ರೇರಿತರವಾಗಿ ಶ್ರಮದಾನದ ಮೂಲಕ ರಸ್ತೆ ಹೊಂಡಗಳನ್ನು ಮುಚ್ಚುವ ಕಾರ್ಯ ಮಾಡಬೇಕಾಯಿತು.