ಕನ್ನಡಪ್ರಭ ವಾರ್ತೆ ಭಾಲ್ಕಿ
ಇಲ್ಲಿಯ ಹಿರೇಮಠ ಸಂಸ್ಥಾನದಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯಿಂದ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ 58ನೇ ಜನ್ಮದಿನದ ಪ್ರಯುಕ್ತ ಕೇಕ್ ಕತ್ತರಿಸಿ ಮಠದಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೆ ನೋಟ್ ಬುಕ್ ವಿತರಿಸಿ ಜನ್ಮದಿನದ ಶುಭಾಶಯ ಕೋರಿ ಅವರು ಮಾತನಾಡಿದರು.
ಕನ್ನಡದ ನೆಲದಲ್ಲಿ ನಿರಂತರವಾಗಿ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತ ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತಿದ್ದಾರೆ. 58ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ನಾರಾಯಣ ಗೌಡರು ಜನ್ಮ ಷಟ್ಪದಿ, ಅಮೃತ ಮಹೋತ್ಸವ, ಶತಮಾನೋತ್ಸವ ಆಚರಿಸಿಕೊಳ್ಳುವಂತಾಗಲಿ ಎಂದು ಹಾರೈಸಿದರು.ನೇತೃತ್ವ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ರಾಜ್ಯದ ಜನರ ಹಿತ ಮತ್ತು ನಾಡಿನ ಹಿತಕ್ಕಾಗಿ ನಾರಾಯಣ ಗೌಡರು ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಅವರಿಗೆ ವಿಶ್ವಗುರು ಬಸವಣ್ಣನರು ಆಯುಷ್ಯ, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಶುಭ ಕೋರಿದರು.
ತಾಲೂಕು ಕರವೇ ಅಧ್ಯಕ್ಷ ಗಣೇಶ ಪಾಟೀಲ್ ಮಾತನಾಡಿ, ನಾರಾಯಣ ಗೌಡರದ್ದು, ಹೋರಾಟವೆ ಜೀವನವಾಗಿದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಕನ್ನಡ ನೆಲದ ರಕ್ಷಣೆಗೆ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಅವರಿಗೆ ದೇವರು ದೀರ್ಘ ವರ್ಷ ಆಯುಷ್ಯ, ಆರೋಗ್ಯ ಕಲ್ಪಿಸಲಿ ಎಂದು ತಿಳಿಸಿದರು.