ಮನರೇಗಾ ಬದಲಿಸಿ ಕೃಷಿಕರಿಗೆ ದ್ರೋಹ: ವಿ.ಎಸ್‌. ಉಗ್ರಪ್ಪ

KannadaprabhaNewsNetwork |  
Published : Feb 13, 2026, 02:45 AM IST
ಸುಳ್ಯದಿಂದ ಮೂಲ್ಕಿಗೆ ಪಾದಯಾತ್ರೆ | Kannada Prabha

ಸಾರಾಂಶ

ಕೇಂದ್ರ ಬಿಜೆಪಿ ಸರ್ಕಾರ ಗ್ರಾಮ ಮಟ್ಟದಲ್ಲಿ ಕೃಷಿಕರಿಗೆ ಉಪಯೋಗವಾಗುವಂತಹ ಮನರೇಗಾ ಯೋಜನೆ ಬದಲಿಸಿ ಕೃಷಿಕರಿಗೆ ದ್ರೋಹ ಮಾಡುತ್ತಿದೆ. ಗಾಂಧಿಯನ್ನು ಕೊಂದಂತಹ ಗೋಡ್ಸೆಯನ್ನು ವೈಭವಿಕರಿಸುವ ನಿಟ್ಟಿನಲ್ಲಿ ವಿ. ಗೋಪಾಲ್‌ ರಾಮ್‌ ಗೋಡ್ಸೆ ಹೆಸರನ್ನು ಯೋಜನೆಗೆ ವಿಜಿ ರಾಮ್‌ ಜಿ ಇಟ್ಟಿದೆ

ಮೂಲ್ಕಿ: ಕೇಂದ್ರ ಬಿಜೆಪಿ ಸರ್ಕಾರ ಗ್ರಾಮ ಮಟ್ಟದಲ್ಲಿ ಕೃಷಿಕರಿಗೆ ಉಪಯೋಗವಾಗುವಂತಹ ಮನರೇಗಾ ಯೋಜನೆ ಬದಲಿಸಿ ಕೃಷಿಕರಿಗೆ ದ್ರೋಹ ಮಾಡುತ್ತಿದೆ. ಗಾಂಧಿಯನ್ನು ಕೊಂದಂತಹ ಗೋಡ್ಸೆಯನ್ನು ವೈಭವಿಕರಿಸುವ ನಿಟ್ಟಿನಲ್ಲಿ ವಿ. ಗೋಪಾಲ್‌ ರಾಮ್‌ ಗೋಡ್ಸೆ ಹೆಸರನ್ನು ಯೋಜನೆಗೆ ವಿಜಿ ರಾಮ್‌ ಜಿ ಇಟ್ಟಿದೆ ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಹೇಳಿದರು.

ದ.ಕ.ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಬದಲಿಸಿರುವುದನ್ನು ಖಂಡಿಸಿ ಹಾಗೂ ಕಾಯ್ದೆ ಮರು ಜಾರಿಗೆ ಆಗ್ರಹಿಸಿ ಸುಳ್ಯದಿಂದ ಮೂಲ್ಕಿವರೆಗೆ ಜರಗಿದ ಮನರೇಗಾ ಬಚಾವ್ ಸಂಗ್ರಾಮ 100 ಕಿ .ಮಿ.ಪಾದಯಾತ್ರೆ ಸಮಾರೋಪದಲ್ಲಿ ಮಾತನಾಡಿದರು.

ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದು ಇ ಡಿ, ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ದುರುಪಯೋಗಪಡಿಸಿಕೊಳ್ಳುತ್ತಿದೆ. ಚಿನ್ನ, ಬೆಳ್ಳಿ, ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರಿಗೆ ಬದುಕಲು ಅಸಾಧ್ಯ ಸ್ಥಿತಿಯಿದೆ. 2014ರವರೆಗೆ ದೇಶದ ಸಾಲ 52 ಲಕ್ಷ ಕೋಟಿ ಇದ್ದು ಈ ಬಾರಿಯ ಬಜೆಟ್‌ ನಲ್ಲಿ 21695,000 ಕೋಟಿಯಾಗಿದ್ದು ಜನರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ ಎಂದರು.

ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯ ಚಂದ್ರ ಜೈನ್, ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪರಿಸರ ಪ್ರವಾಸೋಧ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಕಾಂಗ್ರೆಸ್ ನಾಯಕರಾದ ಪುತ್ತು ಬಾವ, ಮಂಜುನಾಥ ಕಂಬಾರ, ಅಪ್ಪಿ, ಉಷಾ ಅಂಚನ್, ಸುಹಾನ್ ಆಳ್ವ, ಇಬ್ರಾಹಿಂ ನವಾಜ್, ಪ್ರವೀಣ್ ಶಿರ್ತಾಡಿ, ವಿಲ್ಮಾ ಡಿಕೋಸ್ಟ ಮುಲ್ಕಿ, ಮಾಜೀ ಕಾರ್ಪೊರೇಟರ್ ನವೀನ್ ಡಿಸೋಜ ಮತ್ತಿತರರಿದ್ದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಚ್ಛ ಕೊಡಗು ನಿರ್ಮಾಣ ಎಲ್ಲರ ಜವ್ಬಬ್ದಾರಿ: ಡಾ. ಮಂತರ್‌ ಗೌಡ
ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ವಾರ್ಷಿಕ ಮಹೋತ್ಸವ