ಕನ್ನಡಪ್ರಭ ವಾರ್ತೆ ಭದ್ರಾವತಿ
ಅವರು ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ಬೂತ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆ ರಾಷ್ಟ್ರ ಮತ್ತು ರಾಜ್ಯದ ರಾಜಕಾರಣದಲ್ಲಿ ತನ್ನದೇ ಆದ ಕೊಡುಗೆಗಳನ್ನು ನೀಡಿದೆ. ಇಲ್ಲಿನ ರಾಜಕೀಯ ಮುತ್ಸದ್ಧಿಗಳು ಮುಖ್ಯಮಂತ್ರಿ ಮತ್ತು ಸಂಸದರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ನೆಲದಲ್ಲಿ ಇದೀಗ ವೈಯಕ್ತಿಕ ಟೀಕೆಗಳನ್ನು ಮಾಡುವ ಮೂಲಕ ಮತದಾರರ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಇವುಗಳಿಗೆ ಈಗ ಉತ್ತರ ಕೊಡುವ ಅಗತ್ಯವಿಲ್ಲ. ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಸದಾ ಕಾಲ ಕೃತಜ್ಞರಾಗಿದ್ದು, ಚುನಾವಣೆ ಫಲಿತಾಂಶ ಪ್ರಕಟಗೊಂಡು ಗೆಲುವಿನ ವಿಜಯೋತ್ಸವ ಇದೆ ಸ್ಥಳದಲ್ಲಿ ಆಚರಿಸುವ ಮೂಲಕ ಸಂಭ್ರಮದ ಸಿಹಿ ಹಂಚಲಾಗುವುದು ಎಂದರು.ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಬಸಪ್ಪ ಮಾತನಾಡಿ, ನಾವೆಲ್ಲರೂ ಹಿಂದುತ್ವದ ಪರವಾಗಿ ಹೋರಾಟ ನಡೆಸಿಕೊಂಡು ಬಂದವರು. ಬೇರೆಯವರು ನಮಗೆ ಹಿಂದುತ್ವದ ಬಗ್ಗೆ ಪಾಠ ಹೇಳಿಕೊಡುವುದು ಬೇಡ. ಈ ಚುನಾವಣೆಯಲ್ಲಿ ರಾಘವೇಂದ್ರರವರನ್ನು ಪುನಃ ಗೆಲುಸುವ ಜೊತೆಗೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಎಲ್ಲರೂ ಸಹ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದರು.