ಕನ್ನಡಪ್ರಭ ವಾರ್ತೆ ಕಲಬುರಗಿ
ಸೇಡಂ ಮಂಡಲದ ಅಡಕಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಶುಕ್ರವಾರ ಭಾಗವಹಿಸಿ ಮಾತನಾಡಿದ ಅವರು, ನಾನು ವಿಧಾನಸಭಾ ಚುನಾವಣೆಯಲ್ಲಿ ಕುತಂತ್ರ ರಾಜಕಾರಣದಿಂದ ಸೋತಿರಬಹುದು. ಆದರೆ ಈ ಬಾರಿ ಮೋದಿಯವರನ್ನು ಸೋಲಿಸಿದರೆ ದೇವರು ಕ್ಷಮಿಸುವುದಿಲ್ಲ ಮೂರನೇ ಬಾರಿಗೆ ಮೋದಿಯವರ ಪ್ರಧಾನಿಯಾಗಬೇಕು. ನಿಮ್ಮೆಲ್ಲರ ಆಶೀರ್ವಾದ ಬಿಜೆಪಿ ಮೇಲಿರಲಿ. ನಿಮ್ಮ ಪಾದಮಟ್ಟಿ ನಮಸ್ಕಾರ ಮಾಡಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆಂದರು.
ಡಾ. ಉಮೇಶ ಜಾಧವ್ ಮಾತನಾಡಿ, ಸನಾತನ ಹಿಂದೂ ಧರ್ಮವನ್ನು ಅವಹೇಳನ ಮಾಡಿದ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯ ಸ್ಟಾಲಿನ್ ಹೇಳಿಕೆಯನ್ನು ಸಮರ್ಥಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆಯವರಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದರು.ಕಾಂಗ್ರೆಸ್ ಆಡಳಿತದಲ್ಲಿ ಧರ್ಮವನ್ನು ಅವಹೇಳನ ಮಾಡುವುದು, ದೇಗುಲಗಳನ್ನು ಕಟ್ಟದಂತೆ ತಡೆಯುವುದು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಾಗಿದೆ ಎಂದು ತಿವಿದರು.
ನೂರಾರು ಕಾರ್ಯಕರ್ತರು ಬಿಜೆಪಿಗೆ ಪಕ್ಷಾಂತರ
ಸೇಡಂ ಮಂಡಲದಿಂದ ಅಡಕಿ ಗ್ರಾಮದ ಯುವಕರಾದ ವಿನೋದ್ ಯಾದವ್, ರಮೇಶ್ ರೆಡ್ಡಿ, ಷರತ್ತು ಯಾದವ್, ಶರಣು ಯಾದವ್, ಸಂತೋಷ ಯಾದವ್, ನಾಗರಾಜ್ ಟಿ ಸಚಿನ್, ಅಶೋಕ್ ರೆಡ್ಡಿ, ಸುನಿಲ್ ಪುನೀತ್ ಹಾಗೂ ಅನಂತ ರೆಡ್ಡಿ ಪಾಟೀಲ್ ಹಾಸನಪಲ್ಲಿ ಮತ್ತು ನಾಗಭೂಷಣ ರೆಡ್ಡಿ ನೇತೃತ್ವದಲ್ಲಿ ಸೇಡಂನ ಪ್ರಮುಖರಾದ ಶ್ರೀಕಾಂತ ರೆಡ್ಡಿ ವೆಂಕಟೇಶ್ ಪಾಟೀಲ್, ಭೀಮರೆಡ್ಡಿ ಮಲ್ಲಿಪಲ್ಲಿ, ವೆಂಕಟೇಶ ಪಾಟೀಲ್ ಮಾದ್ವಾರ, ಭೀಮಶೆಟ್ಟಿ ಇಮ್ಡಾಪುರ, ರಾಜ್ಯಶೇಖರ್ ಸ್ವಾಮಿ, ಸುಬ್ಬಾರೆಡ್ಡಿ, ಬಸವರಾಜ ಇಮ್ಡಾಪುರ, ಜವಾಹರ್ ನಗರದ ಲಾಲ ಅಹಮದ್, ವೆಂಕಟರೆಡ್ಡಿ ಪಾಟೀಲ್, ಭಗವಂತ ಪಾಟೀಲ್ ಇಮ್ಡಾಪುರ, ರವಿ ಸಿಂಗ್, ಆನಂದ ಸಿಂಗ್, ಭೀಮರೆಡ್ಡಿ ಸೇರಿ ವೆಂಕಟಪ್ಪ ಸೇರಿ ಮತ್ತಿತರು ಬಿಜೆಪಿಗೆ ಸೇರ್ಪಡೆಗೊಂಡರು.