ನಾರ್ಗಾಣೆ: ಶ್ರೀಗೌರಿ ಗಣೇಶ ಉತ್ಸವ ಮೂರ್ತಿ ವಿಸರ್ಜನೆ

KannadaprabhaNewsNetwork |  
Published : Sep 19, 2024, 01:55 AM IST
ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ | Kannada Prabha

ಸಾರಾಂಶ

ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ 11ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಯನ್ನು ಭವ್ಯ ಮಂಟಪದಲ್ಲಿ ಇರಿಸಿ ಗ್ರಾಮದ ಮುಖ್ಯ ಬೀದಿಯಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಿ ಶ್ರೀದೇವಿ ಕೆರೆಯಲ್ಲಿ ವಿಸರ್ಜಿಸಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ 11ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಯನ್ನು ಭವ್ಯ ಮಂಟಪದಲ್ಲಿ ಇರಿಸಿ ಗ್ರಾಮದ ಮುಖ್ಯ ಬೀದಿಯಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಿ ಶ್ರೀದೇವಿ ಕೆರೆಯಲ್ಲಿ ವಿಸರ್ಜಿಸಲಾಯಿತು.

ಇತ್ತೀಚೆಗೆ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಗೆ 9 ದಿನಗಳ ಕಾಲ ಆರ್ಚಕರಾದ ಅವಿನಾಶ್ ಆರಾಧ್ಯ, ಲೋಕೇಶ್ ಆರಾಧ್ಯ ಹಾಗೂ ಪ್ರಕಾಶ್ ಆರಾಧ್ಯ ತಂಡದವರು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಯನ್ನು ಗದ್ದೆಹಳ್ಳದ ವರೆಗೆ ಶೋಭಾಯಾತ್ರೆ ಡಿಜೆ ಪಟಾಕಿಗಳನ್ನು ಸಿಡಿಸುವ ಮೂಲಕ ಉತ್ಸವ ಮೂರ್ತಿಯನ್ನು ನಾರ್ಗಾಣೆ ಗ್ರಾಮದ ಶ್ರೀದೇವಿ ಕೆರೆಯಲ್ಲಿ ವಿಸರ್ಜಿಸಲಾಯಿತು.

ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷ ಮನುಕುಮಾರ್, ಪ್ರಧಾನ ಕಾರ್ಯದರ್ಶಿ ಆಕಾಶ್, ಖಜಾಂಚಿ ಮೋಹನ, ಸಹಕಾರ್ಯದರ್ಶಿಗಳಾಗಿ ಶಿವಪ್ರಸಾದ್, ಅನಿ, ಸಂಘಟನಾ ಕಾರ್ಯದರ್ಶಿಶ್ರೀನಿ, ಮುರುಗ, ಬಿಂದು, ಮಣಿ, ವಸಂತ, ದಯಾನಂದ, ಕಿರಣ್, ಸುಧಿ, ಸಂಜು, ಗೌರವ ಅಧ್ಯಕ್ಷರಾಗಿ ಶಿವಪ್ಪ,ರಾಜ, ಆನಂದ, ಬಿ.ಡಿ.ರಾಜು ರೈ, ಶರತ್, ವಿವೇಕ್‌ ರೈ, ಕುಶಾಲಪ್ಪ, ಪಿ.ಆರ್.ಸುನಿಲ್‌ಕುಮಾರ್ ಹಾಗೂ ಸಮಿತಿ ಸದಸ್ಯರು ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ