ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದಲ್ಲಿ ಮಹಿಳೆಯರ ಸಬಲೀಕರಣದ ಜತೆಗೆ ದೇಶದ ಅಭಿವೃದ್ಧಿಯಲ್ಲೂ ಮಹಿಳೆಯರು ನಾಯಕತ್ವ ವಹಿಸಬೇಕು ಎಂಬ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಹಿಳೆಯರಿಗಾಗಿ ಶೇ.33ರಷ್ಟು ಮೀಸಲಾತಿ ನೀಡುತ್ತಿದೆ ಎಂದರು.
2047ರ ವಿಕಸಿತ ಭಾರತದ ಕಲ್ಪನೆ ದೊಡ್ಡದು. ಆರ್ಥಿಕವಾಗಿ, ಶೈಕ್ಷಣಿಕವಾಗಿ ಮಾತ್ರವಲ್ಲದೆ ರಾಜಕೀಯವಾಗಿಯೂ ಮಹಿಳೆಯರು ಸಬಲೀಕರಣಗೊಳ್ಳಬೇಕು. ಇದಕ್ಕಾಗಿ ಹಲವಾರು ಕಾರ್ಯಕ್ರಮ ಜಾರಿಗೊಳಿಸಲಾಗಿದೆ. 2027ರಲ್ಲೇ ಜನಗಣತಿ ಮಾಡಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ಜಗಣಗತಿಯನ್ನು 2027ಕ್ಕೆ ಮಾಡಲಾಗುತ್ತಿದೆ. 2029ರ ಲೋಕಸಭೆ ಚುನಾವಣೆಯೊಳಗೆ ಜನಗಣತಿ ಮುಗಿಯುವುದು ಕಷ್ಟವಾದ್ದರಿಂದ ವಿಶೇಷ ಅಧಿವೇಶನದಲ್ಲಿ ನಾರಿಶಕ್ತಿ ವಂದನ ಅಭಿಯಾನ ಕಾನೂನಾಗಲಿದೆ ಎಂದರು.ಈಗಾಗಲೇ ಲೋಕಸಭೆಯಲ್ಲಿ 543 ಸ್ಥಾನಗಳಿವೆ. ಅದನ್ನು ಹೆಚ್ಚಿಸಿ 816ಕ್ಕೆ ಹೆಚ್ಚಿಸಲಾಗುತ್ತಿದೆ. ಇದರಿಂದ ಪುರುಷರಿಗೂ ತಮ್ಮ ಸ್ಥಾನ ತಪ್ಪಿ ಹೋಗುವ ಭಯವೂ ಇರುವುದಿಲ್ಲ. ಜನಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸ್ಥಾನಗಳನ್ನು ಹೆಚ್ಚಿಸುವ ಅನಿವಾರ್ಯತೆ ಇದೆ. ಇದು ಸಂಭ್ರಮದ ಕ್ಷಣ. ಭಾರತದ ಮಹಿಳೆಯರಲ್ಲದೆ ವಿಶ್ವದ ಮಹಿಳೆಯರು ಸಂಭ್ರಮಿಸುವ ಕ್ಷಣ ಎಂದರು.
ಕಾಂಗ್ರೆಸ್ ನಲ್ಲಿ ಇರುವಂತೆ ಬಿಜೆಪಿಯಲ್ಲಿ ವಂಶಪಾರಂಪರ್ಯ ಆಡಳಿತವಿಲ್ಲ. ಕಾಂಗ್ರೆಸ್ ನಲ್ಲಿ ಒಂದೇ ಕುಟುಂಬ ಸಬಲೀಕರಣವಾಗುತ್ತಿದೆ. ಬಿಜೆಪಿಯಲ್ಲಿ ಹಾಗೆ ಆಗಿಲ್ಲ. ಇಲ್ಲಿ ತಳಮಟ್ಟದ ಕಾರ್ಯಕರ್ತರೂ ಉನ್ನತ ಹುದ್ದೇಗೇರುತ್ತಾರೆ ಎಂದರು.
ಈ ಸಂಭ್ರಮದ ಕ್ಷಣದಲ್ಲಿ ಮಹಿಳೆರು ಭಾಗವಹಿಸಬೇಕೆಂಬ ದೃಷ್ಟಿಯಿಂದ ಹಾಗೂ ತಮ್ಮ ಅನುಭವವನ್ನು ತಿಳಿಸಬೇಕೆಂಬ ದೃಷ್ಟಿಯಿಂದ ಮೊ. 96671 73333 ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಜತೆಗೆ ಸಹಿ ಸಂಗ್ರಹ ಅಭಿಯಾನವನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದರು.