ದ.ಕ.-ಉಡುಪಿ ಮೀನುಗಾರಿಕಾ ಫೆಡರೇಶನ್‌ಗೆ ರಾಷ್ಟ್ರೀಯ ಪ್ರಶಸ್ತಿ

KannadaprabhaNewsNetwork |  
Published : Nov 22, 2023, 01:00 AM IST
ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಅವರು ಪ್ರಶಸ್ತಿಯನ್ನು ಸ್ವೀರಿಸಿದರು. | Kannada Prabha

ಸಾರಾಂಶ

ಗುಜರಾತ್ ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಚಿವ ಪರ್ಷೋತ್ತಮ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಗೆ 2023ನೇ ಸಾಲಿನ ಕೇಂದ್ರ ಸರ್ಕಾರದ ಮೀನುಗಾರಿಕೆ ಇಲಾಖೆಯ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ನೀಡುವ ಮೀನುಗಾರಿಕಾ ಸಹಕಾರಿ ಸಂಘ ವಿಭಾಗದ ರಾಷ್ಟ್ರೀಯ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಸ್ಥೆ ಪ್ರಶಸ್ತಿ ಲಭಿಸಿದೆ.

ಗುಜರಾತ್ ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಚಿವ ಪರ್ಷೋತ್ತಮ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಸಮಾರಂಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಅರ್. ಪಟೇಲ್, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ರಾಜ್ಯ ಸಚಿವ ಎಲ್.ಮುರುಗನ್, ಡಾ.ಸಂಜೀವ್ ಬಲ್ಯಾನ್, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಇದ್ದರು.

ಮೀನು ಮಾರಾಟ ಫೆಡರೇಶನ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 85 ಸಾವಿರ ಸದಸ್ಯರು ಹಾಗೂ 73 ಸದಸ್ಯ ಸಹಕಾರಿ ಸಂಸ್ಥೆಗಳನ್ನು ಒಳಗೊಂಡಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೀನುಗಾರಿಕೆಗೆ ಸಂಬಂಧಿ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನ, ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ - ವಿದ್ಯಾರ್ಥಿ ವೇತನ, ಆರೋಗ್ಯ ವಿಮೆ, ಮೀನುಗಾರಿಕೆ ಚಟುವಟಿಕೆಗಳಿಗೆ ಪ್ರೋತ್ಸಾಹ, ಮತ್ಸ್ಯಮೇಳ ಆಯೋಜನೆ ಮೂಲಕ ಮೀನುಗಾರಿಕೆ ಉತ್ನನ್ನಗಳಿಗೆ ಪ್ರೋತ್ಸಾಹ ಸಹಿತ ಸಮಾಜಮುಖಿ ಕಾರ್ಯಕ್ರಮಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಫೆಡರೇಶನ್ ಈಗಾಗಲೇ 2015 ರಲ್ಲಿ ಅತ್ಯುತ್ತಮ ಮೀನುಗಾರ ಸಹಕಾರಿ ಸಂಘ ರಾಷ್ಟ್ರ ಪ್ರಶಸ್ತಿ, 2020ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಮೀನು ಮಾರಾಟ ಮಹಾಮಂಡಳ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳಿಗೆ ಸಂಸ್ಥೆ ಮುಡಿಗೇರಿಸಿಕೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ