ಕುಶಾಲನಗರ: ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ

KannadaprabhaNewsNetwork |  
Published : Jul 13, 2025, 01:19 AM IST
ಕಾರ್ಯಕ್ರಮ ಉದ್ಘಾಟನೆ ಸಂದರ್ಭ | Kannada Prabha

ಸಾರಾಂಶ

ಕೊಡಗು ಜಿಲ್ಲಾ ಮೀನುಗಾರಿಕಾ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕೊಡಗು ಜಿಲ್ಲಾ ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು.

ಇಂದಿರಾ ಬಡಾವಣೆಯಲ್ಲಿರುವ ಕೇರಳ ಸಮಾಜ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಉದ್ಘಾಟಿಸಿದರು.

ಮೀನು ವಿಜ್ಞಾನಿ ಹೀರಾಲಾಲ್ ಚೌಧರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ ನಮಿಸಿದರು. ಮೀನು ತೊಟ್ಟಿಗೆ ಅಲಂಕಾರಿಕ ಮೀನುಗಳನ್ನು ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅತಿಥಿಯಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ಬದುಕನ್ನು‌ ಕಟ್ಟಿಕೊಡುವ ಉದ್ಯಮವಾಗಿ ಮೀನು ಕೃಷಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದುನಿಂತಿದೆ. ಬದಕನ್ನು ಹಸನಗೊಳಿಸುವುದರೊಂದಿಗೆ ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ‌ ಕೂಡ ತನ್ನದೇ ಆದ ಕೊಡುಗೆ ನೀಡುತ್ತಿದೆ. ಮನೆಯಂಗಳ, ಕೃಷಿ ಭೂಮಿಯಲ್ಲಿ ಮೀನು ಉತ್ಪಾದನೆ ಉದ್ದಿಮೆ ಸಾಹಸದೊಂದಿಗೆ ಲಾಭದಾಯಕ ಕೂಡ ಎಂದ ಅವರು, ಮೀನು ಕೃಷಿಯಲ್ಲಿ ತೊಡಗುವವರೊಂದಿಗೆ ಇಲಾಖೆ ಹಾಗೂ ಸರಕಾರ ಒತ್ತಾಸೆಯಾಗಿ ಸದಾ ಇರಬೇಕಿದೆ ಎಂದರು.

ಮೀನುಗಾರಿಕೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಸಚಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೀನು ಕೃಷಿಯಲ್ಲಿ ಸ್ವಂತಿಕೆ ಕಂಡುಕೊಂಡು ಮೀನು‌ಮರಿಗಳ ಉತ್ಪತ್ತಿ ಮಾಡಲು ಆರಂಭಿಸಿದ ದಿನವನ್ನು ಮೀನು ಕೃಷಿಕರ ದಿನವನ್ನಾಗಿ ಆಚರಿಸಲು ಆರಂಭಿಸಿದ ಪರಿ ಬಗ್ಗೆ ವಿವರಿಸಿದರು. ಮೀನಿನ‌ ಉತ್ಪಾದನೆ ಕ್ಷೇತ್ರದಲ್ಲಿ ಭಾರತದ ಕೊಡುಗೆ ಬಗ್ಗೆ ಮಾಹಿತಿ ಒದಗಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮೀನು ಕೃಷಿಕ ತೇಜಸ್ ನಾಣಯ್ಯ ಅವರು ಮೀನು ಕೃಷಿಯ ಬಗ್ಗೆ ಮಾರ್ಗದರ್ಶನ ನೀಡಿದರು.

ಇದೇ ಸಂದರ್ಭ ಪ್ರಗತಿಪರ ಮೀನು ಕೃಷಿಕರಾದ ಸೋಮವಾರಪೇಟೆಯ ವಿಜಯಕುಮಾರ್ ಮಳ್ಳೂರು, ಪೊನ್ನಂಪೇಟೆಯ ಡೈಸಿ ತಿಮ್ಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮಹಮ್ಮದ್, ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ್ ಭರತ್, ಸಚಿನ್, ಸಂಘದ ನಿರ್ದೇಶಕರುಗಳು, ಸದಸ್ಯರು ಸೇರಿದಂತೆ ಕುಶಾಲನಗರ, ಸೋಮವಾರಪೇಟೆ ತಾಲೂಕಿನ ಮೀನು ಕೃಷಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!