ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ರಾಜ್ಯ ತಂಡ ಪ್ರಕಟ

KannadaprabhaNewsNetwork |  
Published : Jan 30, 2026, 01:30 AM IST
70 ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ರಾಜ್ಯ ತಂಡ ಪ್ರಕಟ | Kannada Prabha

ಸಾರಾಂಶ

ಚಾಮರಾಜನಗರ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಕರ್ನಾಟಕದ ಸಹಯೋಗದಲ್ಲಿ ಹೊನ್ನೂರಿನ ಡಾ. ಭೀಮ್ ರಾವ್ ರಾಮ್‌ಜಿ ಪ್ರೌಢಶಾಲೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ತರಬೇತಿ ಶಿಬಿರದಲ್ಲಿ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು.

ಕನ್ನಡಪ್ರಭ ವಾರ್ತೆ ಯಳಂದೂರು

ಚಾಮರಾಜನಗರ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಕರ್ನಾಟಕದ ಸಹಯೋಗದಲ್ಲಿ ಹೊನ್ನೂರಿನ ಡಾ. ಭೀಮ್ ರಾವ್ ರಾಮ್‌ಜಿ ಪ್ರೌಢಶಾಲೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ತರಬೇತಿ ಶಿಬಿರದಲ್ಲಿ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು.

ರಾಜ್ಯ ವಿವಿಧ ಜಿಲ್ಲೆಗಳಿಂದ ಬಂದಿದ್ದ 25 ಮಂದಿ ಪ್ರತಿಭಾವಂತ ಬಾಲ್ ಬ್ಯಾಡ್ಮಿಂಟನ್ ಆಟಗಾರರು ಇದರಲ್ಲಿ ಭಾಗವಹಿಸಿದ್ದರು. ತಮಿಳು ನಾಡಿನ ಈರೋಡ್‌ನಲ್ಲಿ ನಡೆಯಲಿರುವ 2025-26 ನೇ ಸಾಲಿನ 70 ನೇ ರಾಷ್ಟ್ರೀಯ ಜೂನಿಯರ್ ಬಾಲಕರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ರಾಜ್ ತಂಡವನ್ನು ಇದೇ ವೇಳೆ ಪ್ರಕಟಿಸಲಾಯಿತು.ರಾಜ್ಯವನ್ನು ಪ್ರತಿನಿಧಿಸುವ ಆಟಗಾರರಾಗಿ ಚರಣ್, ತಸ್ಲೀಮ್, ಲಿಖಿತ್, ಯತೀಶ್, ಆಕಾಶ್, ಪ್ರತಾಪ್, ಕಾರ್ತಿಕ್, ಧನುಷ್, ರಿತ್ವಿನ್ ಎನ್.ಸ್ವಾಮಿ, ಕಾರ್ತಿಕ್ ಆಯ್ಕೆಯಾದರು. ಮೀಸಲು ಆಟಗಾರರಾಗಿ ರಾಜು, ಕೋಮಲ್ ನಾಯಕ್‌ರನ್ನು ಆಯ್ಕೆ ಮಾಡಲಾಯಿತು. ತರಬೇತುದಾರರಾಗಿ ಬಿ. ಸುದರ್ಶಮ್ ವ್ಯವಸ್ಥಾಪಕರಾಗಿ ಕೌಶಿಕ್ ರಾಮ್‌ರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ತಂಡದ ಅಸೋಸಿಯೇಷನ್ ಅಧ್ಯಕ್ಷರಾದ ನಾರಾಯಣಸ್ವಾಮಿ, ಖಜಾಂಚಿ ಮಹದೇವಯ್ಯ, ರಾಜು, ಮಲ್ಲೇಶ್, ವಿಮಲ್ ಹಾಗೂ ಪ್ರಮೋದ್‌ಚಂದ್ರನ್ ಸೇರಿದಂತೆ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!