ಶ್ರೀ ಬೀರೇಶ್ವರ ಸೊಸೈಟಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಗರಿ

KannadaprabhaNewsNetwork |  
Published : Oct 26, 2024, 01:07 AM IST
ಐಟಿ ವಿಭಾಗದಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಗರಿ ಪ್ರಶಸ್ತಿಯನ್ನು ಶ್ರೀ ಬೀರೇಶ್ವರ ಸಂಸ್ಥೆಯ ಉಪ ಪ್ರಧಾನ ವ್ಯವಸ್ಥಾಪಕ ಸುರೇಶ ಮಾನೆ ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕ ಶೇಖರ ಪಾಟೀಲ ಸ್ವೀಕರಿಸಿದರು. ಬಾಬು ನೈಯರ್. ಮನೋಜ್ ಅಗರವಾಲ್, ಸುಭಾಷ ಗುಪ್ತಾ ಇದ್ದರು. | Kannada Prabha

ಸಾರಾಂಶ

ಚಿಕ್ಕೋಡಿ: ಉತ್ತರ ಪ್ರದೇಶ ರಾಜಧಾನಿ ಲಖನೌ ದಲ್ಲಿ ಈಚೆಗೆ ಜರುಗಿದ ರಾಷ್ಟ್ರಮಟ್ಟದ ಸಹಕಾರ ಬ್ಯಾಂಕಗಳ ಸಂಯೋಜನೆ (ಎನ್‌ಸಿಬಿಎಸ್‌) ಹಾಗೂ ಫ್ರಂಟಿಯರ್ಸ್‌ ಕೋ ಆಪರೇಟಿವ್‌ ಬ್ಯಾಂಕಿಂಗ್‌ ಅವಾರ್ಡ್‌-2024ನಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಜೊಲ್ಲೆ ಗ್ರೂಪ್‌ನ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಸಂಸ್ಥೆಗೆ ಐಟಿ ವಿಭಾಗದಲ್ಲಿ ರಾಷ್ಟ್ರಮಟ್ಟದ ಬೆಸ್ಟ್ ಐಟಿ ಅವಾರ್ಡ್‌-2024 ಪ್ರಶಸ್ತಿ ಲಭಿಸಿದೆ.

ಚಿಕ್ಕೋಡಿ: ಉತ್ತರ ಪ್ರದೇಶ ರಾಜಧಾನಿ ಲಖನೌ ದಲ್ಲಿ ಈಚೆಗೆ ಜರುಗಿದ ರಾಷ್ಟ್ರಮಟ್ಟದ ಸಹಕಾರ ಬ್ಯಾಂಕಗಳ ಸಂಯೋಜನೆ (ಎನ್‌ಸಿಬಿಎಸ್‌) ಹಾಗೂ ಫ್ರಂಟಿಯರ್ಸ್‌ ಕೋ ಆಪರೇಟಿವ್‌ ಬ್ಯಾಂಕಿಂಗ್‌ ಅವಾರ್ಡ್‌-2024ನಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಜೊಲ್ಲೆ ಗ್ರೂಪ್‌ನ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಸಂಸ್ಥೆಗೆ ಐಟಿ ವಿಭಾಗದಲ್ಲಿ ರಾಷ್ಟ್ರಮಟ್ಟದ ಬೆಸ್ಟ್ ಐಟಿ ಅವಾರ್ಡ್‌-2024 ಪ್ರಶಸ್ತಿ ಲಭಿಸಿದೆ.

ಸಮಾರಂಭದಲ್ಲಿ ಬ್ಯಾಂಕಿಂಗ್ ಫ್ರಂಟಿಯರ್ ಸಂಸ್ಥಾಪಕ ಬಾಬು ನೈಯರ್, ಗ್ರೂಪ್ ಆಡಿಟರ್ ಮನೋಜ್ ಅಗರವಾಲ್, ಎನ್‌ಎಎಫ್‌ಸಿಯುಬಿ ನಿರ್ದೇಶಕ

ಸುಭಾಷ ಗುಪ್ತಾ ಹಾಗೂ ಪ್ರಮೋದ ಕರ್ನಾಡ್‌ ಪ್ರಶಸ್ತಿ ಪ್ರದಾನ ಮಾಡಿದರು. ಸಂಸ್ಥೆಯ ಪರವಾಗಿ ಉಪಪ್ರಧಾನ ವ್ಯವಸ್ಥಾಪಕ ಸುರೇಶ ಮಾನೆ ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕ ಶೇಖರ ಪಾಟೀಲ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಲಭಿಸಿದ್ದಕ್ಕೆ ಸಂಸ್ಥೆಯ ಸಂಸ್ಥಾಪಕ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಸಹ ಸಂಸ್ಥಾಪಕಿ, ಶಾಸಕಿ ಶಶಿಕಲಾ ಜೊಲ್ಲೆ ಹರ್ಷ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ