ರಾಷ್ಟ್ರಮಟ್ಟದ ಕರೋಕೆ ಗಾಯನ ಕಾರ್ಯಕ್ರಮಕ್ಕೆ ಚಾಲನೆ

KannadaprabhaNewsNetwork |  
Published : Feb 20, 2025, 12:45 AM IST
19ಗಾಯನ | Kannada Prabha

ಸಾರಾಂಶ

‘ಒಂದು ಹೆಜ್ಜೆ ರಕ್ತದಾನಿ’ ಬಳಗದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಶ್ರೀ ನಂದಿಕೇಶ್ವರ ನಾಟಕ ಸಂಘದ ಸಹಾಯಾರ್ಥ ರಾಷ್ಟ್ರಮಟ್ಟದ ಕರೋಕೆ ಗಾಯನ ಕಾರ್ಯಕ್ರಮವನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಮೈಸೂರಿನ ಕರುನಾಡ ಸೇನಾನಿಗಳ ವೇದಿಕೆಯ ಅಂಗಸಂಸ್ಥೆ ‘ಒಂದು ಹೆಜ್ಜೆ ರಕ್ತದಾನಿ’ ಬಳಗದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಶ್ರೀ ನಂದಿಕೇಶ್ವರ ನಾಟಕ ಸಂಘದ ಸಹಾಯಾರ್ಥ ರಾಷ್ಟ್ರಮಟ್ಟದ ಕರೋಕೆ ಗಾಯನ ಕಾರ್ಯಕ್ರಮವನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಸಾಧಕ ಕೃಷಿಕ ಜೋಸೆಫ್ ಲೊಬೋ ಶಂಕರಪುರ, ನಟ - ನಿರ್ದೇಶಕ ಸೋಮನಾಥ ಶೆಟ್ಟಿ, ಬಾಲ ಸಂಗೀತ ಪ್ರತಿಭೆಗಳಾದ ಆಯುಷ್ ಮೆನೇಜಸ್, ರಿಸೆಲ್ ಮೆಲ್ಬಾ ಕ್ರಾಸ್ತಾ ಅವರನ್ನು ಸನ್ಮಾನಿಸಲಾಯಿತು.

‘ಒಂದು ಹೆಜ್ಜೆ ರಕ್ತದಾನಿ ಬಳಗ’ದ ಸ್ಥಾಪಕಾಧ್ಯಕ್ಷ ರಕ್ತದಾನಿ ಮಂಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದಾನ ಕಡಿಮೆಯಾಗುತ್ತಿದೆ, ಆದ್ದರಿಂದ ಯುವಕ, ಯುವತಿಯರು ರಕ್ತದಾನ ಮಾಡಬೇಕು ಎಂದರು.

ಸಂಘಟನೆಯ ಉಡುಪಿ ಜಿಲ್ಲಾ ಬಳಗದ ನೂತ ಅಧ್ಯಕ್ಷೆ ನೀಮ ಲೋಬೋ ಅವರಿಗೆ ಪ್ರಮಾಣ ಪತ್ರ ಹಸ್ತಾಂತರಿಸಲಾಯಿತು. ಮಾನವ ಹಕ್ಕುಗಳ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಪ್ರಸಾದ್ ರೈ, ನಟ ನಿರ್ದೇಶಕ ನಂದನ್ ಬೆಂಗಳೂರು. ಸ್ಯಾಂಡಲ್ ವುಡ್ ಫಿಲಂ ಇನ್‌ಸ್ಟಿಟ್ಯೂಟ್‌ ಸಂಸ್ಥಾಪಕ ಆನಂದ್ ಕಲ್ಪತರು, ಉಡುಪಿ ಕರೋಕೆ ಮ್ಯೂಸಿಕಲ್ ಕ್ಲಬ್‌ ಸಂಸ್ಥಾಪಕ ಮದನ್ ಮಣಿಪಾಲ್, ಕೋಸ್ಟಲ್ ಸ್ಟಾರ್ ಮ್ಯೂಸಿಕ್ ಕ್ಲಬ್ ಸಂಸ್ಥಾಪಕ ಪ್ರಕಾಶ್ ಕಾಮತ್, ಪ್ರಸಿದ್ಧ ಗಾಯಕ ವಿಲ್ಫೆಡ್ ವಿಜಯ ಡೇಸ ಶಂಕರಪುರ, ಪತ್ರಕರ್ತ ಪ್ರಕಾಶ್ ಸುವರ್ಣ ಕಟ್ಪಾಡಿ, ಕಲಾವಿದ ನಾಗೇಶ್ ಕಾಮತ್ ಕಟ್ಪಾಡಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!