ಜುಲೈ 6ರಂದು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ

KannadaprabhaNewsNetwork |  
Published : Jun 25, 2026, 02:15 AM IST
ಸಭೆಯಲ್ಲಿ ಆದಪ್ಪ ಮಾರೆಪ್ಪನವರ ಮಾತನಾಡಿದರು. | Kannada Prabha

ಸಾರಾಂಶ

ಲಿಂ. ಪಂ. ಪಂಚಾಕ್ಷರಿ ಗವಾಯಿಗಳ 82ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳ 16ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಜು. 6ರಂದು ರಾಷ್ಟ್ರಮಟ್ಟದ ಜಂಗಿ ನಿಖಾಲಿ ಕುಸ್ತಿಗಳನ್ನು ಹಮ್ಮಿಕೊಳ್ಳಲಾಗಿದೆ.

ಗದಗ: ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿರುವ ಕುಸ್ತಿ ಕಲೆ ಕೇವಲ ಕ್ರೀಡೆಯಲ್ಲ, ಅದು ಶಿಸ್ತು, ಧೈರ್ಯ, ದೈಹಿಕ ಸದೃಢತೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವ ಮಹತ್ವದ ಪರಂಪರೆ. ಇಂತಹ ಅಮೂಲ್ಯ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಜು. 6ರಂದು ನಗರದಲ್ಲಿ ರಾಷ್ಟ್ರಮಟ್ಟದ ಜಂಗಿ ನಿಖಾಲಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಆದಪ್ಪ ಮಾರೆಪ್ಪನವರ ತಿಳಿಸಿದರು.

ನಗರದ ಜನರಲ್ ವರ್ಕರ್ಸ್ ಹಮಾಲರು ಹಾಗೂ ಚಕ್ಕಡಿಯವರ ಸಮಿತಿಯ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಲಿಂ. ಪಂ. ಪಂಚಾಕ್ಷರಿ ಗವಾಯಿಗಳ 82ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳ 16ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಜು. 6ರಂದು ರಾಷ್ಟ್ರಮಟ್ಟದ ಜಂಗಿ ನಿಖಾಲಿ ಕುಸ್ತಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿವರ್ಷದಂತೆ ಈ ವರ್ಷವೂ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವಿವಿಧ ರಾಜ್ಯಗಳಿಂದ ಹೆಸರಾಂತ ಕುಸ್ತಿಪಟುಗಳು ಜು. 5ರಂದು ಗದುಗಿಗೆ ಆಗಮಿಸಲಿದ್ದು, ಜು. 6ರಂದು ಮಧ್ಯಾಹ್ನ 3ಕ್ಕೆ ವೀರೇಶ್ವರ ಪುಣ್ಯಾಶ್ರಮದ ಸಮೀಪದ ಕುಸ್ತಿ ಮೈದಾನದಲ್ಲಿ(ಕೆ.ಎಚ್.ಪಾಟೀಲ ಸಭಾಭವನದ ಎದುರಿಗೆ) ಪಂದ್ಯಗಳು ಜರುಗಲಿವೆ. ಹಿರಿಯ ಅನುಭವಿಕ ಪೈಲ್ವಾನರು, ನಿರ್ಣಾಯಕರ ಮಾರ್ಗದರ್ಶನದಲ್ಲಿ ಶಿಸ್ತಿನಿಂದ ಹಾಗೂ ಕ್ರೀಡಾಸ್ಫೂರ್ತಿಯಿಂದ ಕುಸ್ತಿಗಳನ್ನು ನಡೆಸಲಾಗುವುದು ಎಂದರು.

ಸಮಿತಿಯ ಉಪಾಧ್ಯಕ್ಷ ಮಕ್ತುಂಸಾಬ ನಾಗನೂರ, ಕಾರ್ಯದರ್ಶಿ ಇಮಾಮಸಾಬ ರೋಣದ, ಖಜಾಂಚಿ ಶಂಕ್ರಪ್ಪ ಯರಗುಡಿ, ಹಮಾಲರ ಒಕ್ಕೂಟದ ರಾಜ್ಯಾಧ್ಯಕ್ಷ ಅಯ್ಯಪ್ಪ ನಾಯ್ಕರ್, ಮಮ್ಮುಸಾಬ ವಾಲೀಕಾರ, ಇಮಾಮಹುಸೇನ ರೋಣದ ಹಾಗೂ ರಾಜೇಸಾಬ ಕಣವಿ ಅವರು ಕುಸ್ತಿ ಪಂದ್ಯ ಯಶಸ್ವಿಗೆ ಸಲಹೆ, ಸೂಚನೆ ನೀಡಿದರು.ಸಭೆಯಲ್ಲಿ ಗೋವಿಂದಪ್ಪ ಮುಂಡರಗಿ, ದೇವರಾಜ ಬಿನ್ನಾಳ, ಹುಸೇನಸಾಬ ವಡವಿ, ಬಸವರಾಜ ಸೂಡಿ, ಫಕ್ರುಸಾಬ ಘಟ್ಟದ, ಯಲ್ಲಪ್ಪ ಬೇವಿನಮರದ, ರಾಮಣ್ಣ ವಾಲ್ಮೀಕಿ, ಜಹಾಂಗೀರಸಾಬ ಲಕ್ಷ್ಮೇಶ್ವರ, ಶ್ರೀಕಾಂತ ಸಿಂಗಾಡಿ, ನಾಗಪ್ಪ ಕೊರ್ಲಹಳ್ಳಿ, ಶೇಖಪ್ಪ ವಾಲ್ಮೀಕಿ, ರವಿ ಚಲವಾದಿ, ಮಾರುತಿ ರಾಯಲದೊಡ್ಡಿ, ಸುಭಾಸ ಶೆಗಣಿ, ರಾಘು ಮುಗಳಿ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸದ ನಿರ್ಮೂಲನೆಗೆ ಮಹಾನಗರ ಪಾಲಿಕೆ ಕಸರತ್ತು
ಅನಧಿಕೃತ ವೈದ್ಯಕೀಯ ವೃತ್ತಿ ತಡೆಗೆ ವಿಶೇಷ ಪಡೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್