ಕನ್ನಡಪ್ರಭ ವಾರ್ತೆ ಯಾದಗಿರಿಡಿ.9 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದ್ದು, ಸಾರ್ವಜನಿಕರ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿ ಜನಸಾಮಾನ್ಯರಿಗೆ ಸಂತೋಷದಿಂದ ಕಳುಹಿಸುವುದೇ ನಮ್ಮ ಧ್ಯೇಯವಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ ಹೇಳಿದರು.
ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇರುವ ಇದೊಂದು ವೇದಿಕೆಯನ್ನು ಸದ್ಬಳಕೆ ಮಾಡಿಕೊಂಡು ಲೋಕ್ ಅದಾಲತ್ನ ಸದುಪಯೋಗ ಪಡೆಯಲು ತಿಳಿಸಿದರು. ನ.9 ರಂದು ಕಾನೂನು ಸೇವೆಗಳ ಪ್ರಾಧಿಕಾರ ದಿನಾಚರಣೆ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ದೇಶಗಳು ತಿಳಿಸುವ ಜೊತೆಗೆ ಸಂಬಂಧಿಸಿದ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗುವುದು ಎಂದರು.
ನ.18 ,19 ಮತ್ತು 20 ರಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಸಾರ್ವಜನಿಕರು ಸದುಪಯೋಗ ಪಡೆಯುವಂತೆ ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಎಲ್. ಹೊನೋಲೆ, ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಸಿ.ಎಸ್. ಮಾಲಿ ಪಾಟೀಲ್ ಇದ್ದರು.