ಮುದ್ರಾಡಿ ಗ್ರಾ.ಪಂ.ಗೆ ರಾಷ್ಟ್ರೀಯ ಪಂಚಾಯಿತಿ ಪ್ರಶಸ್ತಿ ಘೋಷಣೆ

KannadaprabhaNewsNetwork |  
Published : May 10, 2026, 02:30 AM IST
ಮುದ್ರಾಡಿ ಗ್ರಾ.ಪಂ. | Kannada Prabha

ಸಾರಾಂಶ

ಗ್ರಾಮೀಣಾಭಿವೃದ್ಧಿಯ ರಾಷ್ಟ್ರ ಮಟ್ಟದ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ಐತಿಹಾಸಿಕ ಸಾಧನೆ ದಾಖಲಿಸಿದೆ. ಕೇಂದ್ರ ಸರ್ಕಾರ ನೀಡುವ ‘ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ–2025’ರ ‘ಬಡತನ ರಹಿತ ಮತ್ತು ವೃದ್ಧಿತ ಜೀವನೋಪಾಯ ಪಂಚಾಯಿತಿ’ ವಿಭಾಗದಲ್ಲಿ ಮುದ್ರಾಡಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದು ರಾಜ್ಯದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದೆ.

ರಾಂ ಅಜೆಕಾರುಕನ್ನಡಪ್ರಭ ವಾರ್ತೆ ಕಾರ್ಕಳಗ್ರಾಮೀಣಾಭಿವೃದ್ಧಿಯ ರಾಷ್ಟ್ರ ಮಟ್ಟದ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ಐತಿಹಾಸಿಕ ಸಾಧನೆ ದಾಖಲಿಸಿದೆ. ಕೇಂದ್ರ ಸರ್ಕಾರ ನೀಡುವ ‘ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ–2025’ರ ‘ಬಡತನ ರಹಿತ ಮತ್ತು ವೃದ್ಧಿತ ಜೀವನೋಪಾಯ ಪಂಚಾಯಿತಿ’ ವಿಭಾಗದಲ್ಲಿ ಮುದ್ರಾಡಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದು ರಾಜ್ಯದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದೆ.ಈ ಅಪೂರ್ವ ಸಾಧನೆಗಾಗಿ ಪಂಚಾಯಿತಿಗೆ ಕೇಂದ್ರ ಸರ್ಕಾರದಿಂದ ಒಂದು ಕೋಟಿ ರುಪಾಯಿ ನಗದು ಬಹುಮಾನ ಘೋಷಿಸಲಾಗಿದ್ದು, ಮುದ್ರಾಡಿ ಇಂದು ಭಾರತದ ಮಾದರಿ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವ್ಯಾಪ್ತಿಗೆ ಬರುವ ಮುದ್ರಾಡಿ ಪಂಚಾಯಿತಿ ಒಟ್ಟು 1,671 ಮನೆಗಳನ್ನು ಹೊಂದಿದ್ದು, ಸುಮಾರು 6,102 ಜನರಿಗೆ ಸಮರ್ಪಕ ಸೇವೆ ಒದಗಿಸುತ್ತಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿರುವ 1,046 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಏಳಿಗೆಗಾಗಿ ವಿಶೇಷ ಆದ್ಯತೆ ನೀಡಲಾಗಿದೆ.ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕೈಗೊಂಡ ಕ್ರಮಗಳು ಈ ಪ್ರಶಸ್ತಿಗೆ ಪೂರಕವಾಗಿವೆ. ಮುಖ್ಯವಾಗಿ ಕೃಷಿ ಮತ್ತು ತೋಟಗಾರಿಕೆ ಆಧಾರಿತ ಗ್ರಾಮೀಣ ಆರ್ಥಿಕತೆಯನ್ನು ಹೊಂದಿರುವ ಈ ಪಂಚಾಯಿತಿ, ಕಳೆದ ಕೆಲವು ವರ್ಷಗಳಿಂದ ಗ್ರಾಮೀಣ ಜೀವನಮಟ್ಟ ಸುಧಾರಣೆ, ಬಡತನ ನಿರ್ಮೂಲನೆ ಮತ್ತು ಶಾಶ್ವತ ಉದ್ಯೋಗ ಸೃಷ್ಟಿಯತ್ತ ಸಮಗ್ರ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಜಾರಿಗೊಳಿಸಿದೆ.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಮುದ್ರಾಡಿ ಪಂಚಾಯಿತಿ, ಗ್ರಾಮೀಣ ಕುಟುಂಬಗಳಿಗೆ ನಿರಂತರ ಉದ್ಯೋಗ ಭದ್ರತೆ ಒದಗಿಸುವುದರ ಜೊತೆಗೆ ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೂ ಯೋಜನೆಯ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡಿದೆ. ಸಾಮಾಜಿಕ ಭದ್ರತಾ ಯೋಜನೆಗಳ ಶೇ.100ರಷ್ಟು ವ್ಯಾಪ್ತಿ ಸಾಧಿಸಿರುವುದು ಇಲ್ಲಿನ ಮತ್ತೊಂದು ಮೈಲಿಗಲ್ಲು. ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲರ ನೆರವು ಸೇರಿದಂತೆ ಸರ್ಕಾರದ ಎಲ್ಲಾ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸಲಾಗಿದೆ.

ಇದರೊಂದಿಗೆ ಮಹಿಳಾ ಸ್ವಸಹಾಯ ಸಂಘಗಳ ಬಲವರ್ಧನೆಗೆ ಒತ್ತು ನೀಡಿ, ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಪೂರಕವಾದ ಸಣ್ಣ ಉದ್ಯಮ ಮತ್ತು ಆದಾಯ ಉತ್ಪಾದಕ ಯೋಜನೆಗಳನ್ನು ಯಶಸ್ವಿಗೊಳಿಸಿದೆ.ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ಪಂಚಾಯಿತಿ, ಕಾಡು ಉತ್ಪನ್ನ ಆಧಾರಿತ ಜೀವನೋಪಾಯ, ನೀರಿನ ಸಂರಕ್ಷಣೆ, ಮಣ್ಣಿನ ಸುಧಾರಣೆ ಮತ್ತು ಹಸಿರು ಆರ್ಥಿಕತೆಯತ್ತ ಗ್ರಾಮಸ್ಥರನ್ನು ಪ್ರೇರೇಪಿಸಿದೆ. ಈ ಮೂಲಕ ಗ್ರಾಮೀಣಾಭಿವೃದ್ಧಿಯೆಂದರೆ ಕೇವಲ ರಸ್ತೆ-ಕಟ್ಟಡಗಳ ನಿರ್ಮಾಣವಲ್ಲ, ಬದಲಾಗಿ ಶಾಶ್ವತ ಜೀವನೋಪಾಯ ನಿರ್ಮಾಣ ಎಂಬುದನ್ನು ಮುದ್ರಾಡಿ ರಾಷ್ಟ್ರಕ್ಕೆ ಸಾಬೀತುಪಡಿಸಿದೆ. ಈ ಬಾರಿಯ ರಾಷ್ಟ್ರೀಯ ಪಂಚಾಯಿತಿ ಪ್ರಶಸ್ತಿಗಳಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಯ ಹಲವು ಪಂಚಾಯಿತಿಗಳು ವಿವಿಧ ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಗೌರವಕ್ಕೆ ಪಾತ್ರವಾಗಿವೆ.ಆರೋಗ್ಯ ಮತ್ತು ಕಲ್ಯಾಣ ವಿಭಾಗದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಹಾಗೂ ಮಕ್ಕಳ ಸ್ನೇಹಿ ಪಂಚಾಯಿತಿ ವಿಭಾಗದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಹಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದ್ದರೆ, ಸಮಗ್ರ ನೀರು ನಿರ್ವಹಣೆ ವಿಭಾಗದಲ್ಲಿ ಹೆಬ್ರಿ ತಾಲೂಕು ಮಡಾಮಕ್ಕಿ ಗ್ರಾಮ ಪಂಚಾಯಿತಿ 75 ಲಕ್ಷ ರುಪಾಯಿ ಬಹುಮಾನದೊಂದಿಗೆ ಗುರುತಿಸಿಕೊಂಡಿದೆ.ಅಲ್ಲದೆ ಸ್ವಾವಲಂಬಿ ಮೂಲಸೌಕರ್ಯ ಅಭಿವೃದ್ಧಿ ವಿಭಾಗದಲ್ಲಿ ಸಾಣೂರು ಹಾಗೂ ಸಾಮಾಜಿಕ ನ್ಯಾಯ ವಿಭಾಗದಲ್ಲಿ ಉಡುಪಿ ಜಿಲ್ಲೆ ಕುಂದಾಪುರ ಹಕ್ಲಾಡಿ ಗ್ರಾಮ ಪಂಚಾಯಿತಿಗಳು ದೇಶದಲ್ಲಿ ಮೂರನೇ ಸ್ಥಾನ ಪಡೆದು ತಲಾ 50 ಲಕ್ಷ ರುಪಾಯಿ ಬಹುಮಾನ ಗಳಿಸಿವೆ. ಪ್ರಶಸ್ತಿಗಳನ್ನು ನವದೆಹಲಿಯಲ್ಲಿ ಜೂನ್ ಮೊದಲ ವಾರದಲ್ಲಿ ವಿತರಿಸಲಾಗುತ್ತಿದೆ.

ಪಂಚಾಯತಿಗಳ ಅಭಿವೃದ್ಧಿಯ ದೃಷ್ಟಿಕೋನ, ಸಿಬ್ಬಂದಿಗಳ ಕಾರ್ಯಕ್ಷಮತೆ ಹಾಗೂ ಎಲ್ಲರ ಸಹಕಾರದಿಂದ ಈ ಅಭಿವೃದ್ಧಿ ಸಾಧ್ಯವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.-ವಿ‌ ಸುನೀಲ್ ಕುಮಾರ್, ಶಾಸಕರು ಕಾರ್ಕಳಬಡತನ ನಿರ್ಮೂಲನೆ, ಮಹಿಳಾ ಸಬಲೀಕರಣ, ಶಾಶ್ವತ ಉದ್ಯೋಗ ಸೃಷ್ಟಿ ಹಾಗೂ ಸಾಮಾಜಿಕ ಭದ್ರತೆಯನ್ನು ಸಮಗ್ರವಾಗಿ ಜಾರಿಗೊಳಿಸಿದ ಮುದ್ರಾಡಿ ಪಂಚಾಯಿತಿ, ಗ್ರಾಮೀಣಾಭಿವೃದ್ಧಿಯಲ್ಲಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ.-ಸುಭಾಸ್, ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುದ್ರಾಡಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಚ್ಛ ಕುಶಾಲನಗರ ಕಾರ್ಯಕ್ರಮ ಮಾದರಿ: ಟಿ.ಕೆ.ರಾಮಕೃಷ್ಣ ಮೆಚ್ಚುಗೆ
ಹಿರಿಯ ಪತ್ರಕರ್ತ ಚಿ.ನಾ.ಸೋಮೇಶ್‌ಗೆ ಸನ್ಮಾನ