ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕರ್ನಾಟಕ ರಾಜ್ಯ ಮುಕ್ತ ವಿವಿ ಭೌತಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಸಿಐಕ್ಯೂಎ ಸಂಯುಕ್ತವಾಗ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅನೇಕರಿಗೆ ವಿಜ್ಞಾನ ದಿನಾಚರಣೆಯ ಕಾರಣವೇ ತಿಳಿದಿಲ್ಲ. ಹೀಗಾಗಿ, ಯುವ ಸಮೂಹಕ್ಕೆ ವಿಜ್ಞಾನದ ಕುರಿತು ಕುತೂಹಲ ಮೂಡಿಸುವ ಬಗ್ಗೆ ಯೋಜನೆ ರೂಪಿಸಬೇಕು ಎಂದರು.
ಸಿ.ವಿ. ರಾಮನ್ ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ ನೊಬೆಲ್ ಪುರಸ್ಕಾರ ಪಡೆದರು. ಆದರೆ, ಸ್ವಾತಂತ್ರ್ಯ ದೊರೆತ ಬಳಿಕ ದೇಶದ ಯಾರೊಬ್ಬರೂ ಈ ಸಾಧನೆ ಮಾಡಿಲ್ಲ ಎಂಬುದು ವಿಪರ್ಯಾಸ. ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಜ್ಞಾನ ಸಂಶೋಧನೆಗೆ ಮಹತ್ವ ನೀಡಿ ಪ್ರೋತ್ಸಾಹಧನ ನೀಡುತ್ತಿದ್ದು, ವಿವಿಧ ವೈಜ್ಞಾನಿಕ ಸಂಸ್ಥೆಗಳೂ ಸಹಕಾರ ನೀಡುತ್ತಿದೆ ಎಂದು ಅವರು ಹೇಳಿದರು.ವಿಜ್ಞಾನದ ಮೇಲೆ ಹೂಡಿಕೆ ಮಾಡಿದ ದೇಶಗಳು ಜಾಗತಿಕವಾಗಿ ಗುರುತಿಸಿಕೊಂಡಿದ್ದು, ಭಾರತದಲ್ಲೂ ಸಂಶೋಧಕರಿಗೆ ಹೆಚ್ಚಿನ ಪ್ರಾಮುಖ್ಯತೆ ದೊರೆತಾಗ ರಾಷ್ಟ್ರದ ಬೆಳವಣಿಗೆಯ ವೇಗ ಹೆಚ್ಚುತ್ತದೆ ಎಂದು ಅವರು ತಿಳಿಸಿದರು.
ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ, ಹಣಕಾಸು ಅಧಿಕಾರಿ ಪ್ರೊ.ಎಸ್. ನಿರಂಜನ್ ರಾಜ್, ವಿಜ್ಞಾನ ವಿಭಾಗದ ನಿರ್ದೇಶಕಿ ಸುನೀತಾ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಎಸ್.ವಿ. ನಿರಂಜನ, ಸಿಐಕ್ಯೂಎ ಸಂಯೋಜಕ ಡಾ.ವಿ. ಮಹೇಶ, ಉಪ ನಿರ್ದೇಶಕ ಡಾ.ಸಿ.ಎಸ್. ಮಂಜುನಾಥ ಮೊದಲಾದವರು ಇದ್ದರು.