ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರೆಂಜಾಳದ ಸಂಯುಕ್ತ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ‘ನಮ್ಮ ಭಾರತಕ್ಕಾಗಿ ನಮ್ಮ ಯುವಜನತೆ’ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು .
ಸಾರ್ವಜನಿಕ ಸೇವೆಯ ಮೂಲಕ ವ್ಯಕ್ತಿತ್ವವನ್ನು ವೃದ್ಧಿಗೊಳಿಸುವ ಮುಖ್ಯ ಉದ್ದೇಶವನ್ನು ಇಟ್ಟುಕೊಂಡ ರಾಷ್ಟೀಯ ಸೇವೆ ಯೋಜನೆ ವಿದ್ಯಾರ್ಥಿಗಳನ್ನು ಲೋಕ ಸೇವೆಯ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ರಾಷ್ಟ್ರಪ್ರೇಮ ಮತ್ತು ಸೇವಾಭಾವನೆಗಳನ್ನು ಬೆಳೆಸುವಲ್ಲಿ ಮುಖ್ಯ ಪಾತ್ರ ವಹಿಸಿ, ಮತ್ತಷ್ಟು ಪ್ರೇರಣೆ ನೀಡಬೇಕು ಎಂದು ಆಶಿಸಿದರು.ಈ ಒಂದು ವಾರದ ಅನುಭವಧಾರೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಸಮರ್ಥ ನಾಯಕತ್ವ ಹಾಗೂ ಸಮಾಜಪರ ಚಟುವಟಿಕೆಗಳನ್ನು ನಡೆಸಲು ಸ್ಪೂರ್ತಿ ನೀಡುತ್ತವೆ ಎಂದು ಹೇಳಿದರು.
ಉದ್ಯಮಿ ರಾಜೇಶ್ ರೆಂಜಾಳ ಮಾತನಾಡಿ , ಯುವಜನರ ಬುದ್ಧಿಮತ್ತೆ ವೃದ್ಧಿಸಲು ಹಾಗೂ ದೇಶದೊಳಗಿನ ಮನಸ್ಥಿತಿಯನ್ನು ಒಗ್ಗೂಡಿಸಲೆಂದು ಆರಂಭಗೊಂಡಿದ್ದು ರಾಷ್ಟೀಯ ಸೇವಾ ಯೋಜನೆ . ಮನುಷ್ಯ ಪರಿಪೂರ್ಣನಾಗಲು ಕೇವಲ ನಾಲ್ಕು ಗೋಡೆಯ ಪಠ್ಯಪುಸ್ತಕದ ಶಿಕ್ಷಣ ಸಾಲದು. ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಬಯಲು ಶಿಕ್ಷಣದ ಅರಿವು ಮೂಡಿಸಿದಾಗ ಶಿಕ್ಷಣಕ್ಕೆ ನಿಜವಾದ ಅರ್ಥ ಸಿಗುತ್ತವೆ. ಎಂದರು.
ಆಳ್ವಾಸ್ ಪ. ಪೂ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಶ್ಯಾಲೆಟ್ ಮೊನಿಸ್ ನಿರೂಪಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಷ್ ಚಿಪಳೂಣಕರ ಸ್ವಾಗತಿಸಿ, ಶಿಬಿರಾಧಿಕಾರಿ ಮತ್ತು ರಾಷ್ಟೀಯ ಸೇವಾ ಯೋಜನಾಧಿಕಾರಿ ಧರ್ಮೇಂದ್ರ ಕುದ್ರೋಳಿ ವಂದಿಸಿದರು.