ಉಡುಪಿ: ಶ್ರೀ ಧರ್ಮಸ್ಥಳ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಜನ್ಮದಿನದ ಸಂಸ್ಮರಣಾರ್ಥವಾಗಿ ಇಲ್ಲಿನ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಶಾಲಾಕ್ಯತಂತ್ರ ವಿಭಾಗದ ವತಿಯಿಂದ ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರ ‘ಉನ್ಮೀಲನಮ್ - 2026’ ಶನಿವಾರ ನಡೆಯಿತು.ಬೆಂಗಳೂರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಡೀನ್ ಡಾ. ಸಂಜಯ್ ಕೆ.ಎಸ್. ಅವರು ಕಾರ್ಯಾಗಾರ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಅಧ್ಯಕ್ಷತೆ ವಹಿಸಿದ್ದರು. ಶಾಲಾಕ್ಯತಂತ್ರ ವಿಭಾಗದಿಂದ ಇಂದ್ರಿಯ ಪ್ರಕಾಶ ಸಂಶೋಧನಾ ಪ್ರಬಂಧದ ಕಿರುಹೊತ್ತಿಗೆ ಅನಾವರಣಗೊಳಿಸಲಾಯಿತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ ಎಸ್. ಮತ್ತು ರಾಷ್ಟ್ರೀಯ ಕಾರ್ಯಾಗಾರದ ಮುಖ್ಯ ಸಂಘಟನಾ ಕಾರ್ಯದರ್ಶಿ ಡಾ. ಗಾಯತ್ರಿ ಜಿ. ಹೆಗ್ಡೆ ಉಪಸ್ಥಿತರಿದ್ದರು. ಶಾಲಾಕ್ಯತಂತ್ರ ವಿಭಾಗ ಮುಖ್ಯಸ್ಥ ಡಾ. ಜಯಕೃಷ್ಣ ನಾಯಕ್ ಸ್ವಾಗತ ಕೋರಿ ಪ್ರಾಸ್ತಾವನೆಗೈದರು, ಸಂಘಟನಾ ಕಾರ್ಯದರ್ಶಿ ಡಾ. ಸುಷ್ಮಾ ಪ್ರಶಾಂತ್ ವಂದಿಸಿದರು.