ನಾವು ಪ್ರತಿಷ್ಠಾನ ಸಂಸ್ಥೆಯ ಮಕ್ಕಳ ಬೇಸಿಗೆ ಶಿಬಿರ ಸಮಾಪ್ತಿ

KannadaprabhaNewsNetwork |  
Published : May 08, 2025, 12:33 AM IST
ನಾವು ಪ್ರತಿಷ್ಠಾನ ಸಂಸ್ಥೆಯ ಮಕ್ಕಳ ಬೇಸಿಗೆ ಶಿಬಿರ ಸಮಾಪ್ತಿ | Kannada Prabha

ಸಾರಾಂಶ

ನಾವು ಪ್ರತಿಷ್ಠಾನ ಸಂಸ್ಥೆಯ ವತಿಯಿಂದ ಕಳೆದ 20ದಿನಗಳಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರ ಸಮಾರೋಪಗೊಂಡಿತು.

ಕನ್ನಡಪ್ರಭವಾರ್ತೆ ಸೋಮವಾಪೇಟೆ

ನಾವು ಪ್ರತಿಷ್ಠಾನ ಸಂಸ್ಥೆಯ ವತಿಯಿಂದ ಕಳೆದ 20 ದಿನಗಳಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರ ಸೋಮವಾರ ಸಮಾರೋಪಗೊಂಡಿತು.

ಶಿಬಿರಾರ್ಥಿಗಳು ತಾವು ಕಲಿತ ಗ್ರಾಮೀಣ ಆಟಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು. ತಾವೇ ರಚಿಸಿದ ಚಿಕ್ಕಪುಟ್ಟ ಕವನಗಳನ್ನು ವಾಚಿಸಿ ಸಂಭ್ರಮಿಸಿದರು. ಮಕ್ಕಳು ಬಿಡಿಸಿದ ಕಾಲ್ಪನಿಕ ಚಿತ್ರಗಳನ್ನು ಪ್ರೇಮ್‌ನಲ್ಲಿ ಅಳವಡಿಸಿ ಪೋಷಕರಿಗೆ ನೀಡಲಾಯಿತು. ಶಿಬಿರದಲ್ಲಿ ಮಕ್ಕಳು ತಮ್ಮ ಕನಸ್ಸುಗಳು ಹಾಗು ಗುರಿಯ ಬಗ್ಗೆ ಪೋಷಕರಿಗೆ ಬರೆದ ಪತ್ರಗಳನ್ನು ಪೋಷಕರಿಗೆ ನೀಡಲಾಯಿತು.ಗ್ರಾಮೀಣ ಆಟಗಳನ್ನು ಉಳಿಸುವ ನಿಟ್ಟಿನಲ್ಲಿ ಪೊಲೀಸ್ ರಕ್ಷಣೆಯಲ್ಲಿ ಜಾಗೃತಿ ಜಾಥಾ ಪಟ್ಟಣದ ಕೆಲ ರಸ್ತೆಯಲ್ಲಿ ನಡೆಯಿತು. ಮಕ್ಕಳು ರಸ್ತೆಯಲ್ಲೆ ಬೇರಿಂಗ್ ಗಾಡಿಯನ್ನು ಚಾಲಿಸಿದರು. ಸೈಕಲ್ ಟಯರ್‌ನ್ನು ಮರದ ಕೋಲಿನಿಂದ ಚಾಲಿಸಿದರು. ವಿವಿಧ ಗ್ರಾಮೀಣ ಆಟಿಕೆಗಳನ್ನು ಮಕ್ಕಳು ಪ್ರದರ್ಶಿಸಿದರು.ವೇದಿಕೆಯಲ್ಲಿ ಮಕ್ಕಳು ಕಿರು ನಾಟಕಗಳನ್ನು ಪ್ರದರ್ಶಿಸಿದರು. ನೃತ್ಯ ಮಾಡಿ, ಹಾಡು ಹಾಡಿ ಪೋಷಕರಿಂದ ಚಪ್ಪಾಳೆ ಗಿಟ್ಟಿಸಿದರು. ನಾವು ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕರಾದ ಸುಮನ ಮ್ಯಾಥ್ಯು ಮಾತನಾಡಿ, ಶಿಬಿರದಲ್ಲಿ ಪ್ರತಿಭಾವಂತ ಸಂಪನ್ಮೂಲ ವ್ಯಕ್ತಿಗಳು ಗುರಿ, ಸಾಧನೆ, ಕಲಿಕೆ, ಮೂಡನಂಬಿಕೆ, ವಿಜ್ಞಾನದ ಮಹತ್ವ, ಆರೋಗ್ಯ, ಸಾಮಾಜಿಕ ಕರ್ತವ್ಯಗಳು ಇಂತಹ ಅನೇಕ ವಿಷಯಗಳ ಬಗ್ಗೆ ಮಕ್ಕಳಿಗೆ ಕಲಿಸಿದ್ದಾರೆ ಎಂದರು.ಮನೆಯಲ್ಲಿ ಪೋಷಕರು ಮಕ್ಕಳಿಗೆ ನಿರ್ದಿಷ್ಟ ವಿಷಯದ ಬಗ್ಗೆ ಒತ್ತಡ ಹೇರಬಾರದು. ಮನೆಯಲ್ಲಿ ಮಕ್ಕಳು ಸ್ವತಂತ್ರವಾಗಿ ಇರಬೇಕು. ಮಕ್ಕಳಿಗೆ ಮನೆ ಎಂಬುದು ತುಂಬಾ ಇಷ್ಟವಾದ ಸ್ಥಳವಾಗಿರುತ್ತದೆ. ಸಣ್ಣ ಪುಟ್ಟ ತಪ್ಪುಗಳನ್ನು ಮಾಡಲು ಬಿಡಬೇಕು. ನಿರ್ಬಂಧ ಹೇರಬಾರದು. ಮನೆಯೇ ಮೊದಲ ಪಾಠಶಾಲೆ, ತಂದೆ ತಾಯಿ ಮೊದಲು ಗುರುಗಳು ಎಂಬುದನ್ನು ಯಾರು ಮರೆಯಬಾರದು ಎಂದು ಕಿವಿಮಾತು ಹೇಳಿದರು.ನಾವು ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ‘ಹಕ್ಕಿಗೊಂದು ಗುಟುಕು’ ಅಭಿಯಾನದಲ್ಲಿ ಭಾಗವಹಿಸಿ, ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರು ಇಟ್ಟು, ಫೋಟೋ ಕಳುಹಿಸಿ ಬಹುಮಾನ ಗೆದ್ದ ವಿರಾಜಪೇಟೆಯ ಪೂಜಾ ಜಗತ್ ಮತ್ತು ಮೈಸೂರಿನ ಲಿಖಿತ ಅವರಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭ ನಾವು ಪ್ರತಿಷ್ಠಾನದಲ್ಲಿ ಕೆಲಸ ಮಾಡುತ್ತಿರುವ ಮಕ್ಕಳ ಹಕ್ಕುಗಳ ಪ್ರತಿನಿಧಿಗಳಾದ ಪಿ.ಬಿ.ಪೊನ್ನಪ್ಪ, ಎಂ.ಜೆ.ಪ್ರಜ್ವಲ್, ರವಿಚಂದ್ರ, ಬಿ.ಕೆ.ಕುಮಾರಿ, ಶಶಿಕುಮಾರ್ ಅವರನ್ನು ಗೌರವಿಸಲಾಯಿತು.ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು, ಕು. ಖುಷಿ, ಬಿಜ್ಜು ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ