ಯುವಕರಲ್ಲಿ ತಾಂತ್ರಿಕ ಕೌಶಲ್ಯ, ಉದ್ಯೋಗಾವಕಾಶ ಹೆಚ್ಚಿಸುವ ಉದ್ದೇಶಕನ್ನಡಪ್ರಭ ವಾರ್ತೆ ಕಾರವಾರ
ಕಾರವಾರದ ನೌಕಾ ಡಾಕ್ಯಾರ್ಡ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರವಾರದ ಶ್ರೀ ಸೋಮನಾಥ ಐಟಿಐ ಬಿಣಗಾ, ಸರ್ಕಾರಿ ಐಟಿಐ ಬಾಡ್, ಮಲ್ಲಿಕಾರ್ಜುನ ಐಟಿಐ ಸಿದ್ದರ ಹಾಗೂ ಸರ್ಕಾರಿ ಐಟಿಐ ಅಂಕೋಲಾ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ನೌಕಾ ಡಾಕ್ಯಾರ್ಡ್ನ ಅಡ್ಮಿರಲ್ ಸೂಪರಿಂಟೆಂಡೆಂಟ್ ರಿಯರ್ ಅಡ್ಮಿರಲ್ ರವ್ನೀಶ್ ಸೇಠ್, ವಿ.ಎಸ್.ಎಂ. ಹಾಗೂ ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಉಪಸ್ಥಿತರಿದ್ದರು.ಕರ್ನಾಟಕ ನೌಕಾ ಪ್ರದೇಶದ (ಕೆಎನ್ಎ) ನಾಗರಿಕ-ಸೇನಾ ಸಹಕಾರವನ್ನು ಬಲಪಡಿಸುವ ಭಾಗವಾಗಿ ಈ ಉಪಕ್ರಮ ಕೈಗೊಳ್ಳಲಾಗಿದೆ. ಒಪ್ಪಂದದಡಿ ಸ್ಥಳೀಯ ಐಟಿಐ ವಿದ್ಯಾರ್ಥಿಗಳಿಗೆ ನೌಕಾ ಡಾಕ್ಯಾರ್ಡ್ನ ಅತ್ಯಾಧುನಿಕ ನಿರ್ವಹಣೆ ಮತ್ತು ಸಹಾಯಕ ವ್ಯವಸ್ಥೆಗಳು, ಆಧುನಿಕ ತಂತ್ರಜ್ಞಾನಗಳು ಹಾಗೂ ಕೈಗಾರಿಕಾ ಕಾರ್ಯವಿಧಾನಗಳ ಕುರಿತು ನೇರ ಪರಿಚಯ ದೊರೆಯಲಿದೆ. ಅಲ್ಲದೆ, ಉದ್ಯೋಗಾಧಾರಿತ ಪ್ರಾಯೋಗಿಕ ತರಬೇತಿ ಮತ್ತು ಕಾರ್ಯಸ್ಥಳದಲ್ಲಿಯೇ ಕಲಿಕೆಯ ಅವಕಾಶಗಳನ್ನು ಒದಗಿಸಲಾಗುತ್ತದೆ.
ತರಗತಿಯಲ್ಲಿ ಪಡೆಯುವ ಜ್ಞಾನಕ್ಕೂ ಕೈಗಾರಿಕಾ ಕ್ಷೇತ್ರದಲ್ಲಿ ದೊರೆಯುವ ಪ್ರಾಯೋಗಿಕ ಅನುಭವಕ್ಕೂ ಇರುವ ಅಂತರವನ್ನು ಇಂತಹ ಸಹಯೋಗಗಳು ಕಡಿಮೆ ಮಾಡಲಿವೆ. ಕಾರವಾರದ ಸ್ಥಳೀಯ ಯುವಕರಿಗೆ ನೌಕಾ ಡಾಕ್ಯಾರ್ಡ್ನಂತಹ ಅತ್ಯಾಧುನಿಕ ಕಾರ್ಯಸ್ಥಳದಲ್ಲಿ ಕಲಿಕೆಯ ಅವಕಾಶ ದೊರೆಯುವುದು ಕೌಶಲ್ಯಾಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.