ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪಿಸಿ ನವರಾತ್ರಿ ಆಚರಣೆ

KannadaprabhaNewsNetwork |  
Published : Sep 24, 2025, 01:00 AM IST
ಫೋಟೋ : 23 ಹೆಚ್‌ಎಸ್‌ಕೆ 3 ಹೊಸಕೋಟೆ ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಜನನಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಷ್ಟಾಪನೆ ಮಾಡಲಾದ ಚಾಮುಂಡೇಶ್ವರಿ ಪೂಜಾ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಜಯರಾಜ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು. | Kannada Prabha

ಸಾರಾಂಶ

ಹೊಸಕೋಟೆ: ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪಿಸಿ ಪ್ರತಿವರ್ಷ ನವರಾತ್ರಿ ಆಚರಿಸಲಾಗುತ್ತದೆ ಎಂದು ಜನನಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಜಯರಾಜ್ ತಿಳಿಸಿದರು.

ಹೊಸಕೋಟೆ: ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪಿಸಿ ಪ್ರತಿವರ್ಷ ನವರಾತ್ರಿ ಆಚರಿಸಲಾಗುತ್ತದೆ ಎಂದು ಜನನಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಜಯರಾಜ್ ತಿಳಿಸಿದರು. ನಗರದ ಜಯ ಚಾಮರಾಜೇಂದ್ರ ವೃತ್ತದಲ್ಲಿ ಜನನಿ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 12ನೇ ಚಾಮುಂಡೇಶ್ವರಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವರಾತ್ರಿ 9 ದಿನ ಶ್ರದ್ಧಾಭಕ್ತಿಯಿಂದ ಪೂಜಿಸಿ ದೇವರನ್ನ ಸ್ಮರಿಸುವುದು ನಮ್ಮ ಹಿಂದೂ ಸಂಪ್ರದಾಯ. ಅದರಂತೆ ಜಯ ಚಾಮರಾಜೇಂದ್ರ ವೃತ್ತದಲ್ಲಿ ಸುಮಾರು 12 ವರ್ಷಗಳಿಂದ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪಿಸಿ 10 ದಿನ ಅನ್ನದಾಸೋಹ ಏರ್ಪಡಿಸುವುದು ವಾಡಿಕೆ ಎಂದರು. ಚಾಮುಂಡೇಶ್ವರಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರಿಗೆ ಡಾ.ಸಿ.ಜಯರಾಜ್ ಅವರು ಬಾಗಿನ ಅರ್ಪಿಸಿದರು. ಕುಂಬಳಹಳ್ಳಿ ಗ್ರಾಪಂ ಸದಸ್ಯ ಉಪ್ಪಾರಹಳ್ಳಿ ಪುಟ್ಟರಾಜು ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ