ಶೃಂಗೇರಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಹಾಜರು

KannadaprabhaNewsNetwork |  
Published : Jul 04, 2026, 01:15 AM IST
ೇ್ | Kannada Prabha

ಸಾರಾಂಶ

ಶೃಂಗೇರಿಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಶುಕ್ರವಾರ ಬೆಳಿಗ್ಗೆ ವಿಚಾರಣೆಗಾಗಿ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕರೆತಂದ ಕೇರಳ, ಕರ್ನಾಟಕ ಪೋಲೀಸರು ಇಲ್ಲಿನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಕನ್ನಡಪ್ರಭ ವಾರ್ತೆ ಶೃಂಗೇರಿ

ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಶುಕ್ರವಾರ ಬೆಳಿಗ್ಗೆ ವಿಚಾರಣೆಗಾಗಿ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕರೆತಂದ ಕೇರಳ, ಕರ್ನಾಟಕ ಪೋಲೀಸರು ಇಲ್ಲಿನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಶೃಂಗೇರಿ ಬುಕುಡಿಬೈಲು ಸಮೀಪ ಹೆಮ್ಮಿಗೆ ಚಂದ್ರಕಾಂತ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರು ಪಡಿಸಲಾಗಿತ್ತು. ನ್ಯಾಯಾಧೀಶ ಜೀತು.ಆರ್.ಎಸ್ ವಿಚಾರಣೆ ನಡೆಸಿ ಪ್ರಕರಣವನ್ನು ಜುಲೈ 16 ಕ್ಕೆ ಮುಂದೂಡಿದರು. ಆರೋಪಿ ಪರ ವಕೀಲ ವಿ.ಆರ್.ನಟಶೇಖರ್ ಹಾಜರಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬುಕುಡಿಬೈಲು ಸಮೀಪದ ಬಿ.ಜಿ.ಕೃಷ್ಣಮೂರ್ತಿ ವಿರುದ್ದ ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಒಟ್ಟು 53 ಪ್ರಕರಣಗಳಿದ್ದು, ಶೃಂಗೇರಿ ನ್ಯಾಯಾಲಯದಲ್ಲಿ 3 ಪ್ರಕರಣಗಳು ಇವೆ. ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆದ ಹಲವು ನಕ್ಸಲ್ ಚಟುವಟಿಕೆಗಳಲ್ಲಿ ಕೃಷ್ಣಮೂರ್ತಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. 2021 ರ ನವೆಂಬರ್ ನಲ್ಲಿ ಕೇರಳ ಪೊಲೀಸರು ವಯನಾಡು ಜಿಲ್ಲೆಯಲ್ಲಿ ಬಂಧಿಸಿದ್ದರು. ಕುಟುಂಬದವರೊಡನೆ ಭೇಟಿ: ತಾಯಿ ಹಾಗೂ ಕುಟುಂಬದವರನ್ನು ಭೇಟಿ ಮಾಡಿ ಮಾತನಾಡಲು ನ್ಯಾಯಾಧೀಶರ ಅನುಮತಿ ಪಡೆದ ಅವರು ನ್ಯಾಯಾಲಯದ ಕಕ್ಷಿಕಾರರ ಕೊಠಡಿಯಲ್ಲಿ ಕೆಲ ಹೊತ್ತು ತಾಯಿ ಹಾಗೂ ಸಹೋದರಿಯರು, ಕುಟುಂಬಸ್ಥರೊಡನೆ ಮಾತುಕತೆ ನಡೆಸಿದರು.ತಾಯಿಯೊಡನೆ ಭೋಜನ ಮಾಡಿದ ನಂತರ ಮತ್ತೆ ಬಿಗಿ ಭದ್ರತೆ ನಡುವೆ ಕೇರಳದ ವಿಯೂರ್ ಜೈಲಿಗೆ ಕರೆದೊಯ್ಯಲಾಯಿತು.

3 ಶ್ರೀ ಚಿತ್ರ 1-ಶೃಂಗೇರಿ ನ್ಯಾಯಾಲಯಕ್ಕೆ ಶುಕ್ರವಾರ ನಕ್ಸಲ್ ನಾಯಕ ಬಿ.ಜಿ,ಕೃಷ್ಣಮೂರ್ತಿ ಹಾಜರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಸಿರಾಟ ಸಮಸ್ಯೆಯಲ್ಲಿದ್ದ ಮಹಿಳೆ ರಕ್ಷಣೆ
ಪರಿಸರ ಸ್ವಚ್ಛಗೊಳಿಸಿ, ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ: ಶ್ರೀ ಮುರುಘೇಂದ್ರ ಶಿವಾಚಾರ್ಯ ಸ್ವಾಮೀಜಿ