ನಾಯಕ ಸಮುದಾಯದ ಬೆಂಬಲ ಬಿಜೆಪಿಗೆ

KannadaprabhaNewsNetwork |  
Published : Apr 21, 2024, 02:20 AM IST
20ಸಿಎಚ್‌ಎನ್‌52ಚಾಮರಾಜನಗರದ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಭವನದಲ್ಲಿ ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಮಾಜಿ ಅಧ್ಯಕ್ಷ ಹಾಗೂ ಜನಾಂಗದ ಮುಖಂಡ  ಅಪ್ಪಣ್ಣ ಅವರು ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ನಾಯಕ ಜನಾಂಗದ ಪರಿವಾರ, ತಳವಾರ ಪದವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿದ ಬಿಜೆಪಿ ಪಕ್ಷದ ಋಣವನ್ನು ನಾಯಕ ಸಮುದಾಯ ತೀರಿಸಲು ಬಿಜೆಪಿ ಪಕ್ಷವನ್ನು ನಾಯಕ ಸಮುದಾಯ ಬೆಂಬಲಿಸಲಿದೆ ಎಂದು ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಮಾಜಿ ಅಧ್ಯಕ್ಷ ಅಪ್ಪಣ್ಣ ಹೇಳಿದರು.

ಕನ್ನಡಪ್ರಭವಾರ್ತೆ ಚಾಮರಾಜನಗರ

ನಾಯಕ ಜನಾಂಗದ ಪರಿವಾರ, ತಳವಾರ ಪದವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿದ ಬಿಜೆಪಿ ಪಕ್ಷದ ಋಣವನ್ನು ನಾಯಕ ಸಮುದಾಯ ತೀರಿಸಲು ಬಿಜೆಪಿ ಪಕ್ಷವನ್ನು ನಾಯಕ ಸಮುದಾಯ ಬೆಂಬಲಿಸಲಿದೆ ಎಂದು ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಮಾಜಿ ಅಧ್ಯಕ್ಷ ಅಪ್ಪಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಠ ಪಂಗಡಕ್ಕೆ ನಾಯಕ ಜನಾಂಗದ ಪರ್ಯಾಯ ಪದ ಪರಿವಾರ, ತಳವಾರ ಜನಾಂಗವನ್ನು ಸೇರಿಸಬೇಕೆಂದು 46 ವರ್ಷಗಳ ಕಾಲ ಸಾಕಷ್ಟು ಹೋರಾಟ ಮಾಡಲಾಗಿತ್ತು. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಾಗ ನಮ್ಮ ಮನವಿಯನ್ನು ಪುರಸ್ಕರಿಸಿ ಬೇಡಿಕೆಯನ್ನು ಈಡೇರಿಸಿತ್ತು. ಅದರ ಋಣ ನಾಯಕ ಜನಾಂಗದ ಮೇಲಿರುವುದರಿಂದ ನಾಯಕ ಜನಾಂಗ ಋಣ ತೀರಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸಲಿದೆ ಎಂದರು.

ರಾಜ್ಯಾದ್ಯಂತ ನಾಯಕ ಜನಾಂಗ ಬಿಜೆಪಿ ಪಕ್ಷವನ್ನು ಬೆಂಬಲಿಸಲು ತೀರ್ಮಾನಿಸಲಾಗಿದ್ದು, ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿರುವ 2.70 ಲಕ್ಷ ನಾಯಕ ಜನಾಂಗದ ಮತದಾರರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿರುವ 1.40 ಲಕ್ಷ ನಾಯಕ ಜನಾಂಗದ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಲಿದ್ದೇವೆ ಎಂದರು. ನಾಯಕ ಸಮಾಜದ ನಿರ್ಣಯ ತೆಗೆದುಕೊಂಡಿದ್ದು, ಕಂಕಣ ಬದ್ದವಾಗಿ, ಕಟ್ಟಿಬದ್ದವಾಗಿ ಬಿಜೆಪಿ ಬೆಂಬಲಿಸಿ ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ಹಾಕಲಿದ್ದೇವೆ ಎಂದರು.

ಕೇಂದ್ರ ಬರ ಪರಿಹಾರ ನಿಗಮ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ, ಏ.23ರಂದು 3 ಗಂಟೆಗೆ ಎಸ್ಟಿ ಸಮುದಾಯದ ಸಮಾವೇಶವನ್ನು ಚಾಮರಾಜನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಎಸ್ಟಿ ಸಮುದಾಯದ ರಾಜ್ಯಧ್ಯಕ್ಷರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಎಂಎಲ್‌ಸಿ ಸಿದ್ದರಾಜು, ಮಾಜಿ ಮೇಯರ್ ಶಿವಕುಮಾರ್‌, ಮಾಜಿ ಜಿಲ್ಲಾಧ್ಯಕ್ಷ ಸುಂದರ್‌, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಜಯಸುಂದರ್‌, ಮುಖಂಡರಾದ ಚಂದ್ರಶೇಖರ್‌, ಶಂಕರ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ