ಪಕ್ಷ ಭೇದ ಮರೆತು ನಾಯಕ ಸಮುದಾಯ ಸಂಘಟಿತವಾಗಬೇಕು: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

KannadaprabhaNewsNetwork |  
Published : Nov 26, 2024, 12:51 AM IST
ನಾಯಕ ಸಮುದಾಯದ ಮುಖಂಡರುಗಳು ಸಮುದಾಯದ ಪರವಾಗಿ ಸಂಘಟಿತರಾಗಬೇಕು  | Kannada Prabha

ಸಾರಾಂಶ

ರಾಜಕೀಯ ಸಂದರ್ಭದಲ್ಲಿ ರಾಜಕಾರಣ ಮಾಡಿ, ರಾಜಕೀಯ ಮುಗಿದ ನಂತರ ಪಕ್ಷ ಭೇದ ಭಾವ ಮರೆತು ನೀವೆಲ್ಲರೂ ಅಣ್ಣ ತಮ್ಮಂದಿರಾಗಿ ನಮ್ಮ ನಾಯಕ ಸಮುದಾಯದ ಮುಖಂಡರು ಸಮುದಾಯದ ಪರವಾಗಿ ಸಂಘಟಿತರಾಗಬೇಕು ಎಂದು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು. ಹನೂರಿನಲ್ಲಿ ಶ್ರೀಮಠದ 27 ನೇ ವಾರ್ಷಿಕೋತ್ಸವ, ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ 18 ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಮಾತನಾಡಿದರು.

ವಾಲ್ಮೀಕಿ ಮಠದ 27ನೇ ವಾರ್ಷಿಕೋತ್ಸವ । ಫೆ.8, 9ರಂದು ದಾವಣಗೆಯಲ್ಲಿ ಮಠದ ಜಾತ್ರೆ

ಕನ್ನಡಪ್ರಭ ವಾರ್ತೆ ಹನೂರು

ರಾಜಕೀಯ ಸಂದರ್ಭದಲ್ಲಿ ರಾಜಕಾರಣ ಮಾಡಿ, ರಾಜಕೀಯ ಮುಗಿದ ನಂತರ ಪಕ್ಷ ಭೇದ ಭಾವ ಮರೆತು ನೀವೆಲ್ಲರೂ ಅಣ್ಣ ತಮ್ಮಂದಿರಾಗಿ ನಮ್ಮ ನಾಯಕ ಸಮುದಾಯದ ಮುಖಂಡರು ಸಮುದಾಯದ ಪರವಾಗಿ ಸಂಘಟಿತರಾಗಬೇಕು ಎಂದು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಶ್ರೀಮಠದ 27 ನೇ ವಾರ್ಷಿಕೋತ್ಸವ, ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ 18 ನೇ ವರ್ಷದ ಪುಣ್ಯಾರಾಧನೆ, ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರ 17 ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಜಾತ್ರೆಗೆ ಹನೂರು ತಾಲೂಕು ನಾಯಕ ಸಮುದಾಯದ ಮುಖಂಡರಿಗೆ ಜಾತ್ರೆಗೆ ಆಹ್ವಾನ ನೀಡಿ ಮಾತನಾಡಿದರು.

ಫೆ.8 ಮತ್ತು 9ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನ ಹಳ್ಳಿಯಲ್ಲಿ ನಡೆಯುವ ಜಾತ್ರೆಗೆ ಪಕ್ಷ ಭೇದಗಳನ್ನು ಬದಿಗೊತ್ತಿ ಎಲ್ಲರೂ ಗ್ರಾಮದ ಪತ್ರಿ ಹಳ್ಳಿಗಳ ಜಾತ್ರಾ ಮಹೋತ್ಸವಕ್ಕೆ ಎಲ್ಲರನ್ನೂ ಕರೆತನ್ನಿ, ಜಾತ್ರೆಗೆ ಬರುವ ಜನರಿಗೆ ಊಟ, ವಸತಿ ಹಾಗೂ ಮೂಲಸೌಕರ್ಯ ಇರುತ್ತದೆ. ಹೀಗಾಗಿ ಸಮುದಾಯ ಒಗ್ಗಟ್ಟಿನಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದರು.

ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು, ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನ ಹಕ್ಕುಗಳನ್ನು ನೀಡಿದ್ದಾರೆ. ರಾಜಕೀಯ ಅಧಿಕಾರ ಪಡೆದು ನಮ್ಮ ಹಿತವನ್ನು ಮರೆತು ಬಿಡುತ್ತಾರೆ. ರಾಜ್ಯದ ನಾಯಕ ಸಮುದಾಯ ಕರ್ನಾಟಕ ಸರ್ಕಾರ ವಾಲ್ಮೀಕಿ ಜಯಂತಿಗೆ ರಜೆಯನ್ನು ಘೋಷಣೆ ಮಾಡಿದೆ. ಹನೂರು ತಾಲೂಕಿನಲ್ಲಿ ನಾಯಕ ಸಮುದಾಯದ ಮುಖಂಡರು ಇದೇ ತಿಂಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಿರುವುದು ಬಹಳ ಸಂತಸವಾಗಿದೆ ಎಂದು ತಿಳಿಸಿದರು.

ಚಾಮರಾಜನಗರ ಕೇಂದ್ರ ಸ್ಥಾನದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಂದಿನ ದಿನಗಳಲ್ಲಿ ಮಹರ್ಷಿ ವಾಲ್ಮೀಕಿ ಹಾಗೂ ಭಗೀರಥ, ಕನಕ ದಾಸ ಅವರ ಪ್ರತಿಮೆಗಳ ಸ್ಥಾಪನೆಗೆ ಭೂಮಿಪೂಜೆ ನೆರವೇರಿಸಲು ತಿಳಿಸಲಾಗಿದೆ ಎಂದರು.

ತಾಲೂಕು ನಾಯಕ ಸಂಘ ಅಧ್ಯಕ್ಷ ಪುಟ್ಟವೀರ ನಾಯಕ, ಕೊಪ್ಪಾಳಿ ಮಹಾದೇವ ನಾಯಕ, ಗೌರವ ಅಧ್ಯಕ್ಷ ಎಚ್.ಕೆ.ಶಿವಣ್ಣ, ಉಪಾಧ್ಯಕ್ಷರಾದ ವೆಂಕಟಾಚಲ (ತಿರುಪತಿ), ಖಜಾಂಚಿ ಮಲ್ಲೇಶ್, ಬಾಲುನಾಯಕ, ದೊಡ್ಡಿಸಿಗಾನಾಯಕ, ರಾಚಪ್ಪ ಜಗದೀಶ್, ನಂಜಪ್ಪ, ಸಮುದಾಯದ ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!