ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಬಿಜೆಪಿಯ ಜನರ ಪರಯೋಜನೆಗಳ ಕುರಿತ ಕರಪತ್ರ ವಿತರಣೆ ಮಾಡಿ ಎನ್ ಡಿಎ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.
ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆ ನೀಡುವ ಮೂಲಕ ಜನರನ್ನು ಮರಳು ಮಾಡಲು ಹೊರಟಿದ್ದಾರೆ. ಜಿಲ್ಲೆಯ ಜನತೆ ಇದಕ್ಕೆ ಬಗ್ಗೋದಿಲ್ಲ. ಗ್ಯಾರಂಟಿ ಯೋಜನೆಯಿಂದಾಗಿ ಯಾವುದೇ ಲಾಭವಾಗುತ್ತಿಲ್ಲ. ಮಹಿಳೆಯರಿಗೆ ಮಹಿಳೆಯರಿಗೆ ಸರಿಯಾಗಿ ಹಣವು ಸಹ ಬರುತ್ತಿಲ್ಲ ಎಂದು ದೂರಿದರು.ಗ್ಯಾರಂಟಿ ಹೆಸರಿನಲ್ಲಿ ರಾಜಕಾರಣಿಗಳು ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಜತೆಗೆ ಸರ್ಕಾರವನ್ನು ಆರ್ಥಿಕ ದಿವಾಳಿಯನ್ನಾಗಿ ಮಾಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಿಡಿಕಾರಿದರು.
ದೇಶ ಸುಭದ್ರವಾಗಿರಬೇಕಾದರೆ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಹಾಗಾಗಿ ಜಿಲ್ಲೆಯ ಜನತೆ ಎನ್ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ ನೀಡುವ ಮೂಲಕ ಮೋದಿ ಅವರ ಕೈಬಲಪಡಿಸಬೇಕು ಎಂದು ಕೋರಿದರು.
ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರುವುದು ಸತಸಿದ್ಧ. ಮೋದಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರು ಮಂತ್ರಿ ಆಗೋದು ಖಚಿತ. ಹಾಗಾಗಿ ಜನತೆ ಜಿಲ್ಲೆಯ ಅಭಿವೃದ್ಧಿಗಾಗಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತನೀಡಬೇಕು ಎಂದು ಮನವಿ ಮಾಡಿದರು.ಈ ವೇಳೆ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.