ಕನ್ನಡಪ್ರಭ ವಾರ್ತೆ ರಾಯಚೂರು
ಇಲ್ಲಿನ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಬಿಜೆಪಿ ಧ್ವನಿ ಎತ್ತಿದರೆ, ಬಿಜೆಪಿಯ ಅವಧಿಯ ಅಕ್ರಮಗಳನ್ನು ಬಿಚ್ಚಿಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಲಾಕ್ ಮೇಲ್ ಮಾಡುತ್ತಿದ್ದು, ಇಂತಹ ಬ್ಲಾಕ್ ಮೇಲ್ಗಳು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮುಂದೆ ನಡೆಯುತ್ತೆ ಹೊರತು ಬಿಜೆಪಿ ಎದುರಲ್ಲ, ಅವುಗಳಿಗೆ ಬಿಜೆಪಿ ಸುತಾರಾಮ್ ನಡೆಯೋದಿಲ್ಲ ಎಂದು ಕುಟುಕಿದರು.
ಐದು ಗ್ಯಾರಂಟಿಗಳ ಜಾರಿಗೆ ಎಸ್ಸಿಪಿ-ಟಿಎಸ್ಪಿ ಸೇರಿ ವಿವಿಧ ಯೋಜನೆಗಳ ಹಣವನ್ನು ಬಳಸಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಹೊರಡಿಸಿದ ಪ್ರಣಾಳಿಕೆಯಂತೆ ಆಡಳಿತ ನಡೆಸುತ್ತಿಲ್ಲ, ದಲಿತರಿಗೆ ಸೇರಿದ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ತಲೆ ತಗ್ಗಿಸುವಂತಾಗಿದೆ. ಹೊಸ ಕಾಮಗಾರಿ, ಯೋಜನೆಗಳಿಗೆ ಹಣವಿಲ್ಲದ ರಾಜ್ಯ ಸರ್ಕಾರವು ದಿವಾಳಿ ಹಂತ ತಲುಪಿದ್ದು,
ಮುಡಾ ಹಗರಣ ವಿರುದ್ಧ ಇದೇ ಆ.3ರಿಂದ ಮೈಸೂರಿನವರೆಗೂ ಬಿಜೆಪಿ ಪಾದಯಾತ್ರೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಉಂಟಾಗಿರುವ ನೆರೆಯಿಂದ ಜನರು ತತ್ತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ನಡೆಸುವುದು ಸಮಂಜಸವಲ್ಲ ಎಂದಿದ್ದಾರೆಯೇ ಹೊರತು, ಅನ್ಯ ಉದ್ದೇಶದಿಂದಲ್ಲ, ಎಚ್ಡಿಕೆ ಮುನಿಸು ತಾತ್ಕಾಲಿಕವಾಗಿದ್ದು ಪಾದಯಾತ್ರೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶಿವರಾಜ ಪಾಟೀಲ್, ಮುಖಂಡರಾದ ಎನ್.ಶಂಕ್ರಪ್ಪ, ರವೀಂದ್ರ ಜಲ್ದಾರ್, ಉಟ್ಕೂರು ರಾಘವೇಂದ್ರ, ಕಡಗೋಲು ಆಂಜನೇಯ, ಪಿ.ಯಲ್ಲಪ್ಪ, ಪಲಗುಲ ನಾಗರಾಜ, ಮುಕ್ತಿಯಾರ ಸೇರಿ ಕಾರ್ಯಕರ್ತರು ಇದ್ದರು.