ನ.26 ರಿಂದ ಡಿ.8 ರವರೆಗೆ ಕೊಪ್ಪಳದಲ್ಲಿ ಸೇನಾ ಭರ್ತಿ ರ್ಯಾಲಿ । ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ ಕೊಪ್ಪಳ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸೇನಾ ನೇಮಕಾತಿ ರ್ಯಾಲಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೆಳಗಾವಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಈ ರ್ಯಾಲಿಯ ಯಶಸ್ವಿ ನಿರ್ವಹಣೆಗಾಗಿ ವೇದಿಕೆ ಸಮಿತಿ, ಭದ್ರತಾ ಸಮಿತಿ, ಮೂಲಭೂತ ಸೌಕರ್ಯ ಸಮಿತಿ, ಸಾರಿಗೆ ಸಮಿತಿ, ಆಹಾರ ಸಮಿತಿ, ವಸತಿ ಸಮಿತಿ, ಆರೋಗ್ಯ ನೈರ್ಮಲ್ಯೀಕರಣ ಸಮಿತಿ, ಪ್ರಚಾರ ಮತ್ತು ಮಾಧ್ಯಮ ಸಮಿತಿ, ವಿದ್ಯುತ್ ಸರಬರಾಜು ಸಮಿತಿ ಹಾಗೂ ದಾಖಲೆಗಳ ಪರಿಶೀಲನೆ ಸಮಿತಿ ರಚಿಸಲಾಗಿದೆ ಎಂದರು.ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ರ್ಯಾಲಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಹಾಗೂ ನಿಯೋಜಿತ ಸಿಬ್ಬಂದಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮತ್ತು ಬಳಕೆಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಹಾಗೂ ಕ್ರೀಡಾಂಗಣದಲ್ಲಿ ಸ್ವಚ್ಛತೆಗೆ ಕ್ರಮ ವಹಿಸಬೇಕು. ಅಭ್ಯರ್ಥಿಗಳಿಗೆ ತಂಗಲು ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಅಧಿಕಾರಿಗಳ ತಂಡ ಹಾಗೂ ಅಂಬುಲೆನ್ಸ್ ವ್ಯವಸ್ಥೆ, ಅಗ್ನಿಶಾಮಕ ತಂಡ, ವಿದ್ಯುತ್ ದೀಪದ ವ್ಯವಸ್ಥೆ ಸೇರಿದಂತೆ ಮುಂತಾದ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿಯ ಸೇನಾ ನೇಮಕಾತಿ ನಿರ್ದೇಶಕ ಕರ್ನಲ್ ಎ.ಕೆ. ಉಪಾಧ್ಯಾಯ ಮಾತನಾಡಿ, ಜಿಲ್ಲೆಯಲ್ಲಿ ನ.26ರಿಂದ ಡಿ.8 ರವರೆಗೆ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಗೆ ಕೊಪ್ಪಳ ಜಿಲ್ಲಾಡಳಿತದಿಂದ ನಮಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು. ನೇಮಕಾತಿ ಪಾರದರ್ಶಕವಾಗಿ ನಡೆಸುತ್ತಿರುವುದರಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಮತ್ತು ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆಗಾಗಿ ಕಂದಾಯ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೂ ನಿಯೋಜನೆ ಮಾಡಬೇಕು. ಸೇನಾ ನೇಮಕಾತಿ ರ್ಯಾಲಿಯು ಸುಸುತ್ರವಾಗಿ ನಡೆದರೆ ಕೊಪ್ಪಳ ಜಿಲ್ಲಾಡಳಿತಕ್ಕೆ ಮತ್ತು ನಮ್ಮ ಸೇನೆಗೂ ಒಳ್ಳೆಯ ಹೆಸರು ಬರುತ್ತದೆ. ಹಾಗಾಗಿ ರ್ಯಾಲಿಯನ್ನು ಸುವ್ಯವಸ್ಥಿತವಾಗಿ ನಡೆಸಲು ತಮ್ಮ ಸಹಕಾರ ನಮಗೆ ಅತ್ಯಗತ್ಯವಾಗಿದೆ ಎಂದರು.