ಸೂಲಿಬೆಲೆ: ಸೂಲಿಬೆಲೆಯಲ್ಲಿ ಹೆಚ್ಚಾಗಿರುವ ಬೀದಿನಾಯಿಗಳ ನಿಯಂತ್ರಣಕ್ಕೆ ಶೀಘ್ರ ಎಬಿಸಿ ಕಾರ್ಯಕ್ರಮ ಕೈಗೊಳ್ಳಲಾಗುವುದು. ಎಬಿಸಿ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಹೊಸಕೋಟೆ ನಗರಸಭೆ ಈಗಾಗಲೇ ಟೆಂಡರ್ ಕರೆದಿದ್ದು, ಅದೇ ಮಾದರಿಯನ್ನು ಸೂಲಿಬೆಲೆ ಹಾಗೂ ಅಗತ್ಯ ಗ್ರಾಮ ಪಂಚಾಯಿತಿಗಳಲ್ಲಿ ಅನುಸರಿಸಲಾಗುವುದು ಎಂದು ಹೊಸಕೋಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿವಾರ್ಹಣಾಧಿಕಾರಿ ಡಾ.ಸಿ.ಎನ್.ನಾರಾಯಣಸ್ವಾಮಿ ತಿಳಿಸಿದರು.
ಎಬಿಸಿ ಕಾರ್ಯಕ್ರಮ ಅನುಷ್ಠಾನಕ್ಕೆ ಹೊಸಕೋಟೆ ನಗರಸಭೆ ಟೆಂಡರ್ ಕರೆದಿದ್ದು, ಜು.೧೮ರಂದು ನವದೆಹಲಿಯಿಂದ ತಂಡ ಬರಲಿದೆ. ಇದೇ ತಂಡವನ್ನು ಸೂಲಿಬೆಲೆಗೂ ಕರೆಯಿಸಿ ಟೆಂಡರ್ ಮೂಲಕವೇ ಎಬಿಸಿ ಕಾರ್ಯಕ್ರಮ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಹೇಳಿದರು.
ಸೂಲಿಬೆಲೆಯಲ್ಲಿರುವ ಕೋಳಿ ಮಾಂಸದ ಅಂಗಡಿ ಮಾಲೀಕರು ಮಾಂಸದ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಬಿಸಾಡಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಬಾರದು ಎಂದರು.ಗ್ರಾಪಂ ಅಧ್ಯಕ್ಷ ಜನಾರ್ದನರೆಡ್ಡಿ ಮಾತನಾಡಿ, ಕಾನೂನು ಬದ್ಧವಾಗಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬೀದಿ ನಾಯಿಗಳ ಸಂಖ್ಯೆ ಹೆಚ್ಚಿದ್ದು, ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವವರಿಗೂ ಪೋಷಕರು ತಮ್ಮ ಮಕ್ಕಳ ಬಗ್ಗೆ ಗಮನಹರಿಸಬೇಕು. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಹೇಳಿದರು.
ಚಿತ್ರ-೦೭ ಸೂಲಿಬೆಲೆ ೧ ಜೆಪಿಜೆ ನಲ್ಲಿದೆ
ಚಿತ್ರ; ೦೭ ಸೂಲಿಬೆಲೆ ೨ ಜೆಪಿಜೆ ನಲ್ಲಿದೆ