ಕನ್ನಡಪ್ರಭ ವಾರ್ತೆ, ಕಡೂರು
ಪಟ್ಟಣದ ಕನಕ ಸಭಾಂಗಣದಲ್ಲಿ ನಡೆದ ಪುರಸಭೆ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 1996ರಲ್ಲಿ ಅಂದಿನ ಪುರಸಭೆ ಆಡಳಿತ 28 ಜನ ಫಲಾನುಭವಿಗಳಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಪಟ್ಟಣದ ಹೊರ ವಲಯದ ಮಲ್ಲೇಶ್ವರ ಗ್ರಾಮ ವ್ಯಾಪ್ತಿಯಲ್ಲಿ ಖಾಸಾಗಿಯವರ ಜಮೀನು ಖರೀದಿಸಿ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಿವೇಶನದ ಹಕ್ಕುದಾರ ಫಲಾನುಭವಿಗಳು ಬಡಾವಣೆ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಪುರಸಭೆಗೆ ಮನವಿ ಸಲ್ಲಿಸಿದ್ದಾರೆ ಎಂದರು.
ಇತ್ತೀಚೆಗೆ ಫಲಾನುಭವಿಗಳು ಅಲ್ಲಿ ಮನೆ ನಿರ್ಮಿಸಲು ಮುಂದಾದಾಗ ಪುರಸಭೆಗೆ ಜಮೀನು ಮಾರಾಟ ಮಾಡಿದ್ದವರು ಅಡ್ಡಿಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ಖುಲಾಸೆಯಾಗಿ ಪುರಸಭೆ ಪರ ತೀರ್ಪು ಬಂದಿದೆ. ಅವರ ನ್ಯಾಯಯುತ ಬೇಡಿಕೆ ಈಡೇರಿಸಲು ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಂಡರು.ಕಡೂರು ಪಟ್ಟಣದ ಶ್ರೀ ಪೇಟೆ ಗಣಪತಿ ಆಂಜನೇಯ ಸ್ವಾಮಿ ದೇವಸ್ಥಾನದ ರಸ್ತೆ ವಿಸ್ತರಣೆಗೊಂಡಿದ್ದು, ದೇವಾಲಯದ ಬದಿಯಲ್ಲಿ ಶ್ರೀ ಗುರು ರೇವಣ ಸಿದ್ದೇಶ್ವರ ವೃತ್ತ ನಿರ್ಮಿಸುವ ಚರ್ಚಿತ ವಿಷಯಕ್ಕೆ ಒಮ್ಮತದಿಂದ ಸಭೆ ಅಂಗೀಕರಿಸಿತು.
ಮತ್ತೋರ್ವ ಸದಸ್ಯ ತೋಟದಮನೆ ಮೋಹನ್ ಮಾತನಾಡಿ, ಪುರಸಭೆ ಆಡಳಿತ ತಮಗೆ ಬೇಕಾದ ಕೆಲ ಸದಸ್ಯರ ವಾರ್ಡುಗ ಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಉಳಿದ ಸದಸ್ಯರ ವಾರ್ಡುಗಳ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ಇಂತಹ ಧೋರಣೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೋಟೆ ಬಡಾವಣೆಯಲ್ಲಿ ನೀರಿನ ಸಂಪರ್ಕಕ್ಕೆ ಪೈಪ್ ಲೈನ್ ಅಳವಡಿಸಲು ಕಾಮಗಾರಿ ನಿರ್ವಹಿಸಿ ತಿಂಗಳಾದರೂ ಸಂಪೂರ್ಣ ವಾಗಿಲ್ಲ. ಅನೇಕ ಭಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಬಗೆಹರಿಸಿಲ್ಲ ಎಂದು ಸದಸ್ಯ ಸೈಯ್ಯದ್ ಯಾಸೀನ್ ಪುರಸಭೆ ಎಂಜಿನಿಯರ್ ಮೇಲೆ ಅಕ್ರೋಶ ವ್ಯಕ್ತಪಡಿಸಿದರು.
ಸದಸ್ಯರ ಹಲವು ಪ್ರಶ್ನೆ, ಆರೋಪಗಳಿಗೆ ಪ್ರತಿಕ್ರಿಯಿಸಿದ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಪುರಸಭೆಯ ಲಭ್ಯ ಅನುದಾನದಲ್ಲಿ ಪಟ್ಟಣದ ಅನೇಕ ವಾರ್ಡುಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ, ಇದಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದು. ಯಾವುದೇ ತಾರತಮ್ಯದ ಪ್ರಶ್ನೆ ಇಲ್ಲ. ಕ್ಷೇತ್ರದ ಶಾಸಕರ ಬಳಿ ಅಭಿವೃದ್ಧಿ ಕಾರ್ಯಗಳಿಗೆ ₹5 ಕೋಟಿ ಅನುದಾನದ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಈ ಅನುದಾನದಲ್ಲಿ ಪ್ರತಿ ವಾರ್ಡಿಗೆ ಕನಿಷ್ಠ ₹15 ಲಕ್ಷ ಅನುದಾನ ಮೀಸಲಿಡಲಾಗುವುದು. ಸದಸ್ಯರು ತುರ್ತು ಅಥವಾ ಪ್ರಮುಖ ಎನಿಸಿದ ಅಭಿವೃದ್ಧಿ ಕಾರ್ಯಗಳಿಗೆ ಈ ಅನುದಾನ ಬಳಸಿ ಕೊಳ್ಳಬಹುದು ಎಂದರು.
28ಕೆಕೆೆಡಿಯು1.ಕಡೂರು ಪುರಸಭೆಯ ಕನಕ ಸಭಾಂಗಣದಲ್ಲಿ ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.