ಜನಸಂಖ್ಯೆ ಸಮಸ್ಯೆ ಬಗ್ಗೆ ಜಾಗೃತಿ ಅವಶ್ಯ: ಡೀಸಿ

KannadaprabhaNewsNetwork |  
Published : Jul 13, 2024, 01:34 AM IST
ಡೆಂಗ್ಯೂ. ಚಿಕನ್ ಗುನ್ಯೆ ಹಾಗೂ ಮಲೇರಿಯಾ ರೋಗಗಳ ಬಗ್ಗೆ ಜನರು ಭಯ ಪಡಬೇಕಾಗಿಲ್ಲ ಆದರೆ   ಬೆಳವಣಿಗೆಯ ಜಾಗತಿಕ ಜನಸಂಖ್ಯೆಯ ಸವಾಲುಗಳು ಮತ್ತು ಪರಿಣಾಮಗಳಲ್ಲಿ ಬಗ್ಗೆ ಜಾಗೃತಿ ಮೂಡಿಸುವ ಹೊಂದಿರುವ ಜಾಗೃತಿಕ ಕಾರ್ಯಕ್ರಮವಾಗಿದೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು | Kannada Prabha

ಸಾರಾಂಶ

ಕುಟುಂಬ ಯೋಜನೆ ತಾಯಿ ಆರೋಗ್ಯ ಮತ್ತು ಮಾನವ ಹಕ್ಕುಗಳಂತಹ ಜನಸಂಖ್ಯೆಯನ್ನು ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗಾಗಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಕುಟುಂಬ ಯೋಜನೆ ತಾಯಿ ಆರೋಗ್ಯ ಮತ್ತು ಮಾನವ ಹಕ್ಕುಗಳಂತಹ ಜನಸಂಖ್ಯೆಯನ್ನು ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗಾಗಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.ನಗರದ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕಲಬುರಗಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಮ್ಸ್ ವೈದ್ಯಕೀಯ ಮಹಾವಿದ್ಯಾಲಯ ಸಂಸ್ಥೆ ಆಸ್ಪತ್ರೆ ಕಲಬುರಗಿ ಸಹಭಾಗಿತ್ವದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯ ನಿಮಿತ್ತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾಮಾಜಿಕ, ಆರ್ಥಿಕ ಮತ್ತು ಪರಿಸರದ ಪರಿಣಾಮಕಾರಿಗಳಂತಹ ಚಲ್ತಿಯ ಸಮಸ್ಯೆಗಳನ್ನು ವಿಶ್ಲೇಷಿಸುವ ಜನಸಾಮಾನ್ಯ ದಿನವಾಗಿ ಆಚರಿಸುತ್ತಾ ಬಂದಿರುವುದು ವಿಶ್ವ ಜನಸಂಖ್ಯಾ ದಿನದ ಉದ್ದೇಶವಾಗಿದೆ ಎಂದರು.

ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆಯು ಪ್ರತಿ ದಂಪತಿಗೆ ಹೆಮ್ಮೆ ಅಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಬಹಳ ಅವಶ್ಯವಾಗಿದೆ. ಸರಿಯಾದ ವಯಸ್ಸಿನಲ್ಲಿ ಮದುವೆ ಆಗಿ ತಾಯಿಯ ಬಗ್ಗೆ ಕುಟುಂಬ ಯೋಜನೆಯ ಕಾರ್ಯಕ್ರಮದಲ್ಲಿ ಪುರುಷರು ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಮತ್ತು ಅವರಿಗೆ ತಿಳವಳಿಕೆ ನೀಡುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರತಿಕಾಂತ ವಿ. ಸ್ವಾಮಿ, ಡಾ.ಎ.ಎಸ್ ರುದ್ರವಾಡಿ, ಡಾ. ಶರಣಬಸಪ್ಪ ಗಣಜಲ್‌ಖೇಡ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಡಾ. ಉಮೇಶ್ ಆರ್ ರೆಡ್ಡಿ, ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಡಾ. ಓಂ ಪ್ರಕಾಶ ಅಂಬುರೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ.ಶಿವಶರಣಪ್ಪ ಎಂ ಡಿ, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಡಾ. ರಾಜಕುಮಾರ ಕುಲರ್ಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಮಾರುತಿ ಕಾಂಬಳೆ ಮತ್ತು ಡಾ.ವಿನೋದ ಕುಮಾರ್, ಎಂಡಿ ಇರ್ಫಾನ್, ಸುನೀಲ್ ದತ್ತ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೋಮು ರಾಠೋಡ, ಜಿಮ್ಸ್ ವಿಶೇಷ ನವಜಾತ ಶಿಶು ವಿಭಾಗದ ಸಮಾಲೋಚಕ ಮಂಜುನಾಥ ಕಂಬಾಳಿಮಠ, ಜಿಲ್ಲಾಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆರು ಜಾಥಾದಲ್ಲಿ ಭಾಗವಹಿಸಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ