ಕನ್ನಡಪ್ರಭ ವಾರ್ತೆ ತುಮಕೂರುಕೆಪಿಎಸ್ಸಿ ಪರೀಕ್ಷೆಯಲ್ಲಿ ಆಗಿರುವ ಯಡವಟ್ಟುಗಳಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಲಕ್ಷಾಂತರ ಯುವಜನರ ಆತ್ಮಸ್ಥೈರ್ಯ ಕುಸಿದಿದ್ದು, ಪರೀಕ್ಷಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಸರಕಾರ ಮತ್ತು ಪರೀಕ್ಷಾರ್ಥಿಗಳ ನಡುವೆ ಕೊಂಡಿಯಾಗಿ ಕೆಲಸ ಮಾಡಲಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ತುಮಕೂರು ವಿವಿಯ ಸಹಯೋಗದಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಆತ್ಮವಿಶ್ವಾಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನವೋದಯ ಐಎಎಸ್ ಅಕಾಡೆಮಿಯ ಗೌರವಾಧ್ಯಕ್ಷ ನಾಗರಾಜರಾವ್ ಸ್ಕ್ವ್ಯಾಡನ್ ಲೀಡರ್ ಭಾಸ್ಕರ್, ಕೃಷ್ಣ ಏಜುಕೇಷನ್ ಟ್ರಸ್ಟ್ನಅಧ್ಯಕ್ಷರಾದ ಮರಿಚನ್ನಮ್ಮ, ಮುಖಂಡರಾದ ರೇವಣ್ಣಸಿದ್ದಯ್ಯ, ಪ್ರಗತಿಪರ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಎಂ.ವಿ.ಬಸವರಾಜು, ಗ್ರಾಹಕರ ವೇದಿಕೆಯ ಟಿ.ಎಸ್.ನಿರಂಜನ್, ದೀಪ್ತಿ ರಾಜೇಶ್ ಸಿದ್ದಗಂಗಾ ಐಎಎಸ್ಅಕಾಡೆಮಿ, ತ್ರಿವೇಣಿ ಪೃಥ್ವಿ ಐಎಎಸ್ಅಕಾಡೆಮಿ, ವಿಭೂಷಣ್, ಪೃಥ್ವಿ ಹಾಲಪ್ಪ, ಸಂಜೀವ್, ಶಿವಕುಮಾರ್, ನಟರಾಜು, ಶಾಬುದ್ದೀನ್, ವಸುಂಧರ, ಪ್ರೇಮ ಮತ್ತಿತರರು ಉಪಸ್ಥಿತರಿದ್ದರು.