ನೀಲಪ್ಪ ಕೇವಟಿ ಕೌಜಲಗಿ ಅರ್ಬನ್‌ ಬ್ಯಾಂಕಿನ ಅಧ್ಯಕ್ಷ

KannadaprabhaNewsNetwork |  
Published : Aug 03, 2024, 12:42 AM IST
ಗೋಕಾಕ: ಕೌಜಲಗಿ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನೀಲಪ್ಪ ಕೇವಟಿ ಅವರನ್ನು ಗಣ್ಯರು ಅಭಿನಂದಿಸಿದರು. | Kannada Prabha

ಸಾರಾಂಶ

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ನೇತೃತ್ವದಲ್ಲಿ ಕೌಜಲಗಿ ಗೋಕಾಕ ಪಟ್ಟಣದ ಕೌಜಲಗಿ ಅರ್ಬನ್‌ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ನೀಲಪ್ಪ ಬಾಳಪ್ಪ ಕೇವಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಗೋಕಾಕ

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ನೇತೃತ್ವದಲ್ಲಿ ಕೌಜಲಗಿ ಪಟ್ಟಣದ ಕೌಜಲಗಿ ಅರ್ಬನ್‌ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ನೀಲಪ್ಪ ಬಾಳಪ್ಪ ಕೇವಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮಹಾಂತಪ್ಪ ಶಿವನಮಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೀಲಪ್ಪ ಕೇವಟಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ನೂತನ ಅಧ್ಯಕ್ಷರಾಗಿ ನೀಲಪ್ಪ ಬಾಳಪ್ಪ ಕೇವಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಎಸ್.ಬಿ. ಬಿರಾದಾರ ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಉಪಾಧ್ಯಕ್ಷ ಈರಣ್ಣ ಹುದ್ದಾರ, ಎಂ.ಎನ್. ಶಿವನಮಾರಿ, ಶಿವಾನಂದ ಲೋಕನ್ನವರ, ಬಿ.ಎ. ಲೋಕನ್ನವರ, ಸುಭಾಸ ಕೌಜಲಗಿ, ಅಶೋಕ ಪಾಟೀಲ, ಗ್ರಾಮ ಪಂಚಾಯತಿ ಅಧ್ಯಕ್ಷ ಅಶೋಕ ಉದ್ದಪ್ಪನವರ, ಎಸ್.ಬಿ. ಹಳ್ಳೂರ, ಮಹೇಶ ಪಟ್ಟಣಶೆಟ್ಟಿ, ಶಂಕರ ಜ್ಯೋತಿನವರ, ರಾಯಪ್ಪ ಬಳೋಲದಾರ, ಹಾಸಿಂ ನಗಾರ್ಚಿ, ಬಸವರಾಜ ಜೋಗಿ, ಯಲ್ಲಪ್ಪ ಸುನ್ನಾಳ, ಗಂಗಾಧರ ಲೋಕನ್ನವರ, ಶಿವಲಿಂಗ ಮರೆಣ್ಣವರ, ಲಾಡಕಾನ ಮುಲ್ತಾನಿ, ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಗಣ್ಯರು, ಸ್ಥಳೀಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ