ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೀರಲಗಿ ಮರು ನೇಮಕ

KannadaprabhaNewsNetwork |  
Published : Sep 11, 2026, 02:15 AM IST
10ಎಚ್‌ವಿಆರ್‌7 | Kannada Prabha

ಸಾರಾಂಶ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ಅವರನ್ನು ಮರು ನೇಮಕ ಮಾಡಿ ಪಕ್ಷದ ವರಿಷ್ಠರು ಆದೇಶ ಹೊರಡಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಅವರ ನೇಮಕ ಮಹತ್ವ ಪಡೆದುಕೊಂಡಿದೆ.

ಹಾವೇರಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ಅವರನ್ನು ಮರು ನೇಮಕ ಮಾಡಿ ಪಕ್ಷದ ವರಿಷ್ಠರು ಆದೇಶ ಹೊರಡಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಅವರ ನೇಮಕ ಮಹತ್ವ ಪಡೆದುಕೊಂಡಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಳೆದ ಅವಧಿಯಲ್ಲಿ ಸಂಜೀವಕುಮಾರ ನೀರಲಗಿ ಅವರು ಪಕ್ಷದ ಸಂಘಟನೆಯನ್ನು ಬಲಪಡಿಸುವತ್ತ ಗಮನಹರಿಸಿದ್ದರು. ವಿಶೇಷವಾಗಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳ ಸಂದರ್ಭದಲ್ಲಿ ಮುಖಂಡರು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಿ ಚುನಾವಣಾ ಸಂಘಟನೆಗೆ ಚುರುಕು ನೀಡಿದ್ದರು.

ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿಕೊಂಡು ಪಕ್ಷದ ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ತಾಲೂಕು ಹಾಗೂ ಬೂತ್‌ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಸಕ್ರಿಯಗೊಳಿಸುವ ಪ್ರಯತ್ನ ನಡೆಸಿದ್ದರು.

ಚುನಾವಣಾ ಸಂದರ್ಭದಲ್ಲಿನ ಸಂಘಟನಾತ್ಮಕ ಕಾರ್ಯವೈಖರಿ, ಮುಖಂಡರು–ಕಾರ್ಯಕರ್ತರೊಂದಿಗೆ ಹೊಂದಾಣಿಕೆ ಹಾಗೂ ಪಕ್ಷದ ಚಟುವಟಿಕೆಗಳನ್ನು ನಿರಂತರವಾಗಿ ಮುನ್ನಡೆಸಿದ ಹಿನ್ನೆಲೆಯಲ್ಲಿ ಅವರ ಮೇಲೆಯೇ ಪಕ್ಷದ ನಾಯಕತ್ವ ವಿಶ್ವಾಸ ವ್ಯಕ್ತಪಡಿಸಿ ಅಧ್ಯಕ್ಷ ಹುದ್ದೆಯನ್ನು ಮುಂದುವರಿಸಿ ಆದೇಶ ಹೊರಡಿಸಲಾಗಿದೆ.

ತಿಂಗಳ ಹಿಂದೆಯೇ ಎಐಸಿಸಿ ನೇಮಿಸಿರುವ ಉಸ್ತುವಾರಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ, ಪಕ್ಷದ ಪದಾಧಿಕಾರಿಗಳು, ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದರು. ಬಹುತೇಕ ಶಾಸಕರು, ಪದಾಧಿಕಾರಿಗಳು ಸಂಜೀವಕುಮಾರ ಅವರನ್ನೇ ಮುಂದುವರಿಸುವ ಆಸಕ್ತಿ ತೋರಿದ್ದರಿಂದ ಬದಲಾವಣೆ ಗೋಜಿಗೆ ಹೋಗಿಲ್ಲ. ಮರುನೇಮಕದೊಂದಿಗೆ ಮುಂಬರುವ ದಿನಗಳಲ್ಲಿ ಜಿಲ್ಲೆಯ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ನೀರಲಗಿ ಅವರ ಹೆಗಲೇರಿದೆ. ಬೂತ್‌ಮಟ್ಟದ ಸಂಘಟನೆ, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಶಾಸಕರು–ಮುಖಂಡರು–ಕಾರ್ಯಕರ್ತರ ನಡುವೆ ಸಮನ್ವಯ ಮತ್ತಷ್ಟು ಗಟ್ಟಿಗೊಳಿಸುವುದು ಅವರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲಾಧ್ಯಕ್ಷನನ್ನಾಗಿ ಮತ್ತೊಮ್ಮೆ ಜವಾಬ್ದಾರಿ ನೀಡಿದೆ. ಪಕ್ಷದ ಹೈಕಮಾಂಡ್‌ಗೆ ನಿರೀಕ್ಷೆಗೆ ತಕ್ಕಂತೆ ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಮುಂಬರುವ ಎಲ್ಲಾ ಚುನಾವಣೆಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದು ಕಾಂಗ್ರೆಸ್‌ ನೂತನ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಎಸ್‌ನಿಂದ ಹಾವೇರಿ ಜಿಲ್ಲೆ ಬರಗಾಲ ಘೋಷಣೆಗೆ ಒತ್ತಾಯಿಸಿ೨೧ರಂದು ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ, ಬೈಕ್ ರ‍್ಯಾಲಿ
ಶೈಕ್ಷಣಿಕ, ಔದ್ಯೋಗಿಕ ಕ್ರಾಂತಿಯಲ್ಲಿ ಮಹಿಳೆ ಸಹಭಾಗಿತ್ವ ಅತ್ಯುತ್ತಮ ಬೆಳವಣಿಗೆ