ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಬೇಕು. ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಸುಮಾರು ೨೦ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಕಾಣದ ರೀತಿಯಲ್ಲಿ ಮೋಸ ಆಗಿದೆ. ಇದೆಲ್ಲದರ ಹೊಣೆ ಹೊತ್ತು ವಿದ್ಯಾಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರೈಲು ದುರಂತದಲ್ಲಿ ಸಾಕಷ್ಟು ಮಂದಿ ಸತ್ತುಹೋದರು ಎಂಬ ಕಾರಣಕ್ಕೆ ಹಿಂದೆ ರೈಲ್ವೆ ಸಚಿವರಾಗಿದ್ದ ಲಾಲ್ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಗೌರವಕ್ಕೆ ಪಾತ್ರರಾದರು. ಅದೇ ರೀತಿ ಮಧುಗಿರಿಯಲ್ಲಿ ಪೊಲೀಸ್ ಲಾಕಪ್ನಲ್ಲೇ ಮಹಿಳೆ ಮೇಲೆ ಅತ್ಯಾಚಾರ ಆಗಿದೆ ಎಂಬ ಕಾರಣಕ್ಕೆ ನಿಜಲಿಂಗಪ್ಪನವರ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಎಂ.ವಿ.ರಾಮರಾವ್ ಅವರು ಸದನದಲ್ಲೇ ರಾಜೀನಾಮೆ ನೀಡುವ ಮೂಲಕ ಮಾದರಿಯಾದರು. ಅದೇ ರೀತಿ ಕೇಂದ್ರ ಸರ್ಕಾರ ಪ್ರತಿಷ್ಠೆ ಬಿಟ್ಟು ಶಿಕ್ಷಣ ಮಂತ್ರಿಯಿಂದ ರಾಜೀನಾಮೆ ಪಡೆದು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.ವಿದ್ಯಾರ್ಥಿಗಳನ್ನೇ ಮುಂದಿಟ್ಟುಕೊಂಡು ಕೆಲವರು ಇಲ್ಲದ ಪಿತೂರಿ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ನಾನು ವಿದ್ಯಾರ್ಥಿಗಳ ಬೆಂಬಲಕ್ಕಿದ್ದೇನೆ. ಅವರ ಚಳವಳಿಯಲ್ಲಿ ಭಾಗವಹಿಸುತ್ತೇನೆ ಎಂದರು.
ರೈತರ ಮೇಲೆ ಗದಾ ಪ್ರಹಾರ:
ಕನ್ನಡ ಸೇನೆ ಮಂಜುನಾಥ್, ದಸಂಸ ಮುಖಂಡ ಎಂ.ವಿ.ಕೃಷ್ಣ, ಮುಖಂಡರಾದ ಪಂಚೇಗೌಡ, ಪಾರ್ಥಸಾರಥಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.