ಚನ್ನಪಟ್ಟಣ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇನ್ನು ದಲಿತರಿಗೆ ಸೂರು, ಸ್ಮಶಾನಭೂಮಿ ಕಲ್ಪಿಸಲಾಗಿಲ್ಲ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ದಲಿತರ ಬಡಾವಣೆಗಳ ಅಭಿವೃದ್ಧಿ ನಿರ್ಲಕ್ಷಿಸಲಾಗಿದೆ. ಅಸ್ಪೃಶ್ಯತೆ ತೊಡೆದುಹಾಕುವಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ವಿಫಲವಾಗಿದೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಗೌರವ ನೀಡದ ಅಧಿಕಾರಿಗಳು:
ಸರ್ಕಾರಿ ಕಚೇರಿಗಳಲ್ಲೇ ದಲಿತ ಸಮುದಾಯದ ಸಿಬ್ಬಂದಿ ಬಗ್ಗೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಕೆಲ ಅಧಿಕಾರಿಗಳು ಕಿರಿಯ ದಲಿತ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಗೌರವಯುತವಾಗಿ ನಡೆಸಿಕೊಳ್ಳದ ಆರೋಪಗಳಿವೆ. ಅರಿವು ಮೂಡಿಸಬೇಕಾದ ಹಿರಿಯ ಅಧಿಕಾರಿಗಳೇ ಈ ರೀತಿ ನಡೆದುಕೊಂಡರೆ, ದಲಿತರ ರಕ್ಷಣೆ ಮಾಡುವವರು ಯಾರು ಎಂದು ಪ್ರಶ್ನಿಸಿದರು.ಸ್ಮಶಾನಭೂಮಿಗೆ ಆಗ್ರಹ:
ನಿವೇಶನ ನೀಡಿ:
ನಗರಸಭೆ ನಿರ್ಲಕ್ಷ್ಯ:
ನಗರ ವ್ಯಾಪ್ತಿಯಲ್ಲಿ ದಲಿತ ಸಮುದಾಯದವರು ವಾಸಿಸುವ ಬಡಾವಣೆಗಳಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ. ಇತರೆ ಸಮುದಾಯದವರ ಬಡಾವಣೆಗಳನ್ನು ಸ್ವಚ್ಛ ಮಾಡುವ ನಗರಸಭೆ, ದಲಿತರ ಬಡಾವಣೆಗಳ ಸ್ವಚ್ಛತೆ ಕಡೆಗಣಿಸಿದೆ. ನಮ್ಮ ಅಭಿವೃದ್ಧಿ ಕುಂಠಿತಕ್ಕೆ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಇಂದಿನ ಸಭೆಗೆ ಪೌರಾಯುಕ್ತರು ಗೈರಾಗಿರುವುದೇ ಇದಕ್ಕೊಂದು ನಿರ್ದಶನ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪೂರ್ಣಗೊಳ್ಳದ ಅಂಬೇಡ್ಕರ್ ಭವನ:
ನಗರ ಪೊಲೀಸ್ ಠಾಣೆಯ ಮುಂದಿರುವ ಅಂಬೇಡ್ಕರ್ ಪುತ್ಥಳಿ ಬಳಿ ಕಸ ಸುರಿಯುವುದನ್ನು ನಿಲ್ಲಿಸಬೇಕು. ಹಿಂದೆ ನಗರಸಭೆಯಲ್ಲಿ ದಲಿತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸ್ಕಾಲರ್ಶಿಪ್ ಮುಂದುವರಿಸಬೇಕು. ನಮ್ಮನ್ನು ಆಳುವ ಜನಪ್ರತಿನಿಧಿಗಳಿಗೆ ನಮ್ಮ ಸಮಸ್ಯೆಗಳನ್ನು ಆಲಿಸುವ ವ್ಯವಧಾನವಿಲ್ಲ. ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾವು ಬದುಕುವುದಾದರೂ ಹೇಗೆ ಎಂದು ಕಿಡಿಕಾರಿದರು.
ಇದಕ್ಕೆ ಉತ್ತರಿಸಿದ ತಹಸೀಲ್ದಾರ್ ಮಹೇಂದ್ರ, ಇಲ್ಲಿ ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಪಟ್ಟಿಮಾಡಿಕೊಳ್ಳಲಾಗಿದೆ. ಸ್ಮಶಾನ ಇಲ್ಲದ ಕಡೆಗಳಲ್ಲಿ ಊರಿನಿಂದ ಜಮೀನು ನೀಡಲು, ಸರ್ಕಾರಿ ಜಮೀನು ಲಭ್ಯವಿರುವ ಕಡೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದು. ಅಸ್ಪೃಶ್ಯತೆಗೆ ಸಂಬಂಧಿಸಿದಂತೆ ಅರಿವು ಮೂಡಿಸಲಾಗುವುದು. ನಗರದ ಸಮಸ್ಯೆಗೆ ಸಂಬಂಧಿಸಿದಂತೆ ಪೌರಾಯುಕ್ತರಿಗೆ ಪತ್ರ ಬರೆದು ಸಮಸ್ಯೆ ಕುರಿತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ದಲಿತ ಮುಖಂಡರಾದ, ಮತ್ತೀಕೆರೆ ಹನುಮಂತಯ್ಯ, ಕೋಟೆ ಸಿದ್ದರಾಮಯ್ಯ, ಶೇಖರ್, ಕೂಡ್ಲೂರು ಸಿದ್ದರಾಮು, ಕಿರಣ್ ಕುಮಾರ್, ಶಿವಾನಂದ, ಅಪ್ಪಗೆರೆ ಶ್ರೀನಿವಾಸಮೂರ್ತಿ, ದೇವರಾಜು, ಬಿವಿಎಸ್ ಕುಮಾರ್ ಇತರರು ಉಪಸ್ಥಿತರಿದ್ದರು.
ಬಾಕ್ಸ್.................
28ರಲ್ಲಿ 19ಪ್ರಕರಣಕ್ಕೆ ಬಿ ರಿಪೋರ್ಟ್!
ಪೊಟೋ೩೧ಸಿಪಿಟಿ೧,೨:
ಚನ್ನಪಟ್ಟಣ ತಾಪಂ ಕಚೇರಿಯಲ್ಲಿ ತಹಸೀಲ್ದಾರ್ ಮಹೇಂದ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದುಕೊರತೆ ಹಾಗೂ ಹಿತರಕ್ಷಣಾ ಸಮಿತಿ ಸಭೆ ನಡೆಯಿತು.