ಕನ್ನಡಪ್ರಭ ವಾರ್ತೆ ಚವಡಾಪುರ
ಏ.2ರಂದು ನಡೆದ ಪರೀಕ್ಷೆಯ ಸಮಯದಲ್ಲಿ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರು ಶಿರವಾಳ ಗ್ರಾಮದ ವೀರ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಮದಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಅನಧಿಕೃತವಾಗಿ ಪ್ರವೇಶ ಮಾಡಿರುವ ಆರೋಪದಡಿ ಬಂಕಲಗಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಭೀಮಾಶಂಕರ ಅವರನ್ನು ಕೂಡ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಬಿಇಒ ಹಾಜಿಮಲಂಗ ಇಂಡಿಕರ್ ಮಾಹಿತಿ ನೀಡಿದ್ದಾರೆ.
ನಕಲಿಗೆ ಅವಕಾಶ ಸಿಗುತ್ತಿಲ್ಲವೆಂಬ ಶಂಕೆ: ದ್ವಿತಿಯ ಪಿಯು ಪರೀಕ್ಷೆಯ ಸಮಯದಲ್ಲಿ ಕರ್ಜಗಿ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆಯಲು ಸಹಕಾರ ನೀಡಲಿಲ್ಲವೆಂಬ ಕಾರಣಕ್ಕೆ ಪೊಲೀಸ್ ಪೇದೆಯನ್ನು ಯುವಕರಿಬ್ಬರು ಹಲ್ಲೆ ನಡೆಸಿದ ಘಟನೆಯ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿ ವೆಬ್ ಕಾಸ್ಟಿಂಗ್ ಮೂಲಕ ನೀಗಾ ಇಡಲಾಗುತ್ತಿತ್ತು. ಇದರಿಂದ ನಕಲಿಗೆ ಅವಕಾಶ ಸಿಗುತ್ತಿಲ್ಲವೆಂಬ ಕಾರಣಕ್ಕೆ ಕರ್ಜಗಿ ಹಾಗೂ ಮಣೂರ ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಕೇಬಲ್ ವೈರ್, ಸರ್ವಿಸ್ ವೈರ್ಗಳ ಸಮೇತ ಕಳ್ಳತನ ಮಾಡಲಾಗಿದೆ.ಎರಡು ಪರೀಕ್ಷಾ ಕೇಂದ್ರಗಳ ಸಿಸಿ ಕ್ಯಾಮೇರಾಗಳನ್ನು ಕದ್ದ ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕಾಗಿದೆ.