ಕನ್ನಡಪ್ರಭ ವಾರ್ತೆ ಶಹಾಪುರ
ತಾಲೂಕಿನ ದಿಗ್ಗಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕೋಟಿ 30 ಲಕ್ಷ ಜನಸಂಖ್ಯಾ ಹೊಂದಿರುವ ಹಾಗೂ ಹಲವು ನಿರ್ಲಕ್ಷ್ಯಗಳಿಗೆ ಒಳಗಾಗಿರುವ ಪಂಚಾಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸಿಕೊಡಬೇಕೆಂದು ಕಳೆದ ಮೂರು ವರ್ಷಗಳಿಂದ ರಾಜ್ಯಾದ್ಯಾಂತ ಬೃಹತ್ ಪ್ರಮಾಣದ ವಿವಿಧ ಹೋರಾಟಗಳ ಮೂಲಕ ಸರ್ಕಾರಗಳ ಗಮನಕ್ಕೆ ತಂದು ಒತ್ತಾಯಿಸಿದರೂ ಸಹ ಯಾವುದೇ ರೀತಿಯಿಂದ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದರು.
ಕರ್ನಾಟಕದ ಪ್ರಮುಖ ಸಾಂಸ್ಕೃತಿಕ ಸಮುದಾಯವಾಗಿರುವ ಪಂಚಮಸಾಲಿಯು ನಾಡಿಗೆ ವಿಶಿಷ್ಟ ಕೊಡುಗೆ ನೀಡಿದೆ. ಆದರೆ, ಈ ಸಮುದಾಯವು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಾ ಶೈಕ್ಷಣಿಕ, ಸಾಮಾಜಿಕ, ಉದ್ಯೋಗ ಮುಂತಾದ ಕ್ಷೇತ್ರಗಳಲ್ಲಿ ತುಂಬಾ ಹಿಂದುಳಿದಿದೆ. ಪಂಚಮಸಾಲಿ ಸಮುದಾಯವು ಸಂಘಟಿತ ಗೊಳ್ಳುವ ಮೂಲಕ ಸರ್ಕಾರಕ್ಕೆ ಪಂಚಮಿ ಸಾಲಿ ಸಮುದಾಯದ ತಾಕತ್ತು ತೋರಿಸಬೇಕಾಗಿದೆ ಎಂದರುಫೆ.29ರಂದು ಹುಣಸಗಿ ತಾಲೂಕಿನ ರಾಜ್ಯ ಹೆದ್ದಾರಿಯಲ್ಲಿ ಯಾದಗಿರಿ ಜಿಲ್ಲೆಯ ವತಿಯಿಂದ ಲಿಂಗಪೂಜೆಯ ಮೂಲಕ ಪಂಚಮಸಾಲಿ ಬೃಹತ್ ಹೋರಾಟವನ್ನು ಮಾಡಲಾಗುವುದು ಮತ್ತು ಮಾ.10 ರಂದು ಕಲಬುರಗಿಯಲ್ಲಿ ಪ್ರಥಮಬಾರಿಗೆ ಕಲ್ಯಾಣ ಕರ್ನಾಟಕದ ಪಂಚಮಸಾಲಿಯ ಬೃಹತ್ ಪ್ರಮಾಣದ ಹೋರಾಟವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಮೂಲಕ ಸಂವಿಧಾನದ ಸಾಮಾಜಿಕ ನ್ಯಾಯದ ಆಶಯದಂತೆ ಹಲವು ಕ್ಷೇತ್ರಗಳಲ್ಲಿ ತುಂಬಾ ಹಿಂದುಳಿದಿರುವ ಪಂಚಾಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.