ವೃದ್ಧರ ಕಡೆಗಣನೆ ಆತಂಕದ ವಿಷಯ

KannadaprabhaNewsNetwork |  
Published : Jun 05, 2025, 01:24 AM IST
೩ಬಿಎಸ್ವಿ೦೨- ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ವಿರಕ್ತಮಠದ ಜಾತ್ರಾಮಹೋತ್ಸವದಂಗವಾಗಿ ಹಮ್ಮಿಕೊಂಡಿರುವ ಇಂಗಳೇಶ್ವರ ಉತ್ಸವದಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ಗೋಷ್ಠಿಯನ್ನು ಸಾಹಿತಿ ಭಾರತಿ ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿದ್ಯಾವಂತ ಮಹಿಳೆಯರು ಕುಟುಂಬದ ವೃದ್ಧರನ್ನು ಕಡೆಗಣಿಸುತ್ತಿರುವುದು ಅತ್ಯಂತ ಆತಂಕದ ವಿಷಯ. ಮಹಿಳೆಯರು ಜಂಟಿ ಕುಟುಂಬದೊಂದಿಗೆ ಪ್ರೀತಿ ಮಮತೆಯಿಂದ ಬದುಕಬೇಕು. ಕುಟುಂಬದಲ್ಲಿ ಸಾಮರಸ್ಯ ವಾತಾವರಣ ಸೃಷ್ಟಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ವಿದ್ಯಾವಂತ ಮಹಿಳೆಯರು ಕುಟುಂಬದ ವೃದ್ಧರನ್ನು ಕಡೆಗಣಿಸುತ್ತಿರುವುದು ಅತ್ಯಂತ ಆತಂಕದ ವಿಷಯ. ಮಹಿಳೆಯರು ಜಂಟಿ ಕುಟುಂಬದೊಂದಿಗೆ ಪ್ರೀತಿ ಮಮತೆಯಿಂದ ಬದುಕಬೇಕು. ಕುಟುಂಬದಲ್ಲಿ ಸಾಮರಸ್ಯ ವಾತಾವರಣ ಸೃಷ್ಟಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಇಂಗಳೇಶ್ವರದ ವಿರಕ್ತಮಠದ ಲಿಂ.ಸಿದ್ದಲಿಂಗ ಶಿವಯೋಗಿಗಳ ೯೧ನೇ ಜಾತ್ರಾ ಮಹೋತ್ಸವದಂಗವಾಗಿ ಮಂಗಳವಾರ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಘಟಕದ ಸಹಯೋಗ ಹಮ್ಮಿಕೊಂಡಿದ್ದ ಇಂಗಳೇಶ್ವರ ಉತ್ಸವದ ಮಹಿಳಾ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿ, ಜ್ಞಾನವೇ ಸಕಲ ಶಕ್ತಿ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಹೂವಿನಹಿಪ್ಪರಗಿ ಪತ್ರಿಮಠದ ದ್ರಾಕ್ಷಾಯಿಣಿ ಮಾತಾಜಿ ಆಶೀವ೯ಚನ ನೀಡಿದರು. ಮಹಿಳೆಗೆ ತಾಯಿಯ ಸಂಸ್ಕಾರ ಪ್ರಭಾವ ಬೀರುವದು. ತಾಯಿ ದೇವರ ಸ್ವರೂಪಿ. ಕುಟುಂಬದ ನಿವ೯ಹಣೆ ಜವಾಬ್ದಾರಿ ಮಹಿಳೆಯರ ಮೇಲಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಮಡಿವಾಳಮ್ಮ ನಾಡಗೌಡ ಮಾತನಾಡಿ, ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದಿದ್ದಾಳೆ. ಬಸವಾದಿ ಶರಣರು ಮಹಿಳೆಗೆ ಪೂಜ್ಯನೀಯ ಸ್ಥಾನ ನೀಡಿದ್ದು, ನಂತರ ಡಾ.ಬಾಬಾಸಾಹೇಬ ಅಂಬೇಡ್ಕರ ಸಂವಿಧಾನದ ಮೂಲಕ ಮಹಿಳೆಗೆ ಸಮಾನತೆಯ ಹಕ್ಕುಗಳನ್ನು ನೀಡಿ ಸಮಥ೯ರನ್ನಾಗಿ ಮಾಡಿದರು ಎಂದು ಹೇಳಿದರು.ಉಪನ್ಯಾಸ ನೀಡಿದ ಸಾಹಿತಿ ಶಿಲ್ಪಾ ಭಸ್ಮೆ ಮಾತನಾಡಿ, ಇತ್ತೀಚಿಗೆ ಬೂಕರ್‌ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಬಾನು ಮುಸ್ತಾಕ್‌ ಅವರ ಸಾಹಿತ್ಯ ದೇಶಕ್ಕೆ ಕನ್ನಡ ಸಾಹಿತ್ಯ ಪರಿಚಯಿಸಿದ ಕೀರ್ತಿ ಮಹಿಳಾ ಸಮಾಜಕ್ಕೆ ಸಲ್ಲುತ್ತದೆ. ಪಾಕಿಸ್ತಾನ ಯುದ್ಧದ ರೂವಾರಿ ಸೂಫಿಯಾ ಖುರೇಶಿ, ವ್ಯೂಮ್‌ ಸಿಂಗ್‌ ಮಹಿಳೆಯರು ನೇತೃತ್ವದ ವಹಿಸಿದ್ದು ಅತ್ಯಂತ ಶ್ಲಾಘನೀಯ. ಮಹಿಳೆಯರ ಸ್ಥಾನ ಪಡೆಯುವ ಶಕ್ತಿ ಮಹಿಳೆಯರೇ ಪಡೆಯಬೇಕು ಎಂದರು.

ಸಾಹಿತಿ ರಶ್ಮೀ ಬದ್ನೂರ, ಚಿತ್ರ ಕಲಾ ಮಂಡಳಿ ಸದಸ್ಯೆ ರಾಜೇಶ್ವರಿ ಮೋಪಗಾರ, ಸಾಹಿತಿ ಶಾಂತಾ ಬಿರಾದಾರ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಇತರರು ಇದ್ದರು. ಮುಖ್ಯ ಅಧ್ಯಾಪಕಿ ಕಮಲಾ ಮುರಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಿರಿಜಾ ಸಜ್ಜನ ಪ್ರಾಥಿ೯ಸಿದರು. ಸಾಹಿತಿ ಮಮತಾ ಮುಳಸಾವಳಗಿ ನಿರೂಪಿಸಿದರು. ಶಾಂತಾ ಚೌರಿ ವಂದಿಸಿದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’