ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕೆಲವಡಿ ಗ್ರಾಪಂ ಲಿಂಗಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಕೆರೆ ಪರಿಶೀಲಿಸಿದ ಸಂದರ್ಭದಲ್ಲಿ ಕೆರೆಯ ಗಡಿ ಗುರುತಿಸುವಿಕೆ ಹಾಗೂ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ಕೈಗೊಳ್ಳದಿರುವುದನ್ನು ಗಮನಿಸಿದ ಅವರು, ಸಂಬಂಧಿಸಿದ ಪಿಡಿಒ, ತಾಂತ್ರಿಕ ಸಂಯೋಜಕ ಹಾಗೂ ಸಹಾಯಕ ತಾಂತ್ರಿಕ ಅಭಿಯಂತರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು. ಕೆರೆಗೆ ಸಮಗ್ರ ಯೋಜನೆ ರೂಪಿಸಿ, ಸೂಕ್ತ ಗಡಿ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಇನ್ಲೆಟ್ ಮತ್ತು ಔಟಲೆಟ್ ಕಾಲುವೆಗಳನ್ನು ವೈಜ್ಞಾನಿಕವಾಗಿ ನಿರ್ಮಿಸುವಂತೆ ನಿದೇರ್ಶನ ನೀಡಿದರು.
ವಿಬಿ ಜಿ-ರಾಮ ಜಿಯಡಿ ಕೈಗೊಂಡ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರೊಂದಿಗೆ ಮಾತನಾಡಿ, ಸಮಸ್ಯೆಗಳನ್ನು ಆಲಿಸದ ಸಿಇಒ ಅವರು ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರ ಮೂಲಭೂತ ಸೌಲಭ್ಯಗಳಲ್ಲಿ ಯಾವುದೇ ರಾಜಿ ಇರಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ತೋಗಣಸಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಕುಡಿಯುವ ನೀರು ಅನಗತ್ಯವಾಗಿ ಪೋಲಾಗುತ್ತಿರುವುದು ಗಮನಕ್ಕೆ ಬಂದಿತು. ನೀರು ಪೋಲು ಮಾಡುತ್ತಿರುವ ಮನೆಗಳು ಹಾಗೂ ವ್ಯಕ್ತಿಗಳನ್ನು ಗುರುತಿಸಿ ನಿಯಮಾನುಸಾರ ನೋಟಿಸ್ ನೀಡಲು ಸೂಚಿಸಿದರು. ಗ್ರಾಮಸ್ಥರಿಗೆ ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದು ತಿಳಿಸಿದರು. ಗ್ರಾಮದಲ್ಲಿ ಗ್ರಾಮ ಸಂಚಾರ ಕೈಗೊಂಡಾಗ ಚರಂಡಿಗಳು ತ್ಯಾಜ್ಯದಿಂದ ತುಂಬಿರುವುದು ಹಾಗೂ ಹಲವು ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಸಮರ್ಪಕವಾಗಿ ನಡೆಯದಿರುವುದು ಕಂಡುಬಂದಿತು. ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಗಳಲ್ಲಿ ಹಲವು ದಿನಗಳಿಂದ ಸ್ವಚ್ಛತೆ ಕೈಗೊಳ್ಳದಿರುವ ಅಧಿಕಾರಿಗಳ ಕಾರ್ಯವೈಖರಿ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಪಿಡಿಒಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸದೇ ಇರುವ ಬಗ್ಗೆ ಸಾರ್ವಜನಿಕರ ದೂರುಗಳು ಹಿನ್ನಲೆಯಲ್ಲಿ ನೋಟಿಸ್ ನೀಡುವಂತೆ ಸೂಚಿಸಿದರು.ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದಿರುವುದನ್ನು ಕಂಡು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದರು. ವೈದ್ಯರು ನಾಲ್ಕು ಆರೋಗ್ಯ ಕೇಂದ್ರಗಳ ಹೆಚ್ಚುವರಿ ಜವಾಬ್ದಾರಿ ಹೊಂದಿರುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ, ವೈದ್ಯರು ಯಾವ ದಿನ ಮತ್ತು ಯಾವ ಸಮಯದಲ್ಲಿ ಯಾವ ಕೇಂದ್ರದಲ್ಲಿ ಲಭ್ಯವಿರುತ್ತಾರೆ ಎಂಬುದನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ತಿಳಿಸುವಂತೆ ಕರ್ತವ್ಯ ವೇಳಾಪಟ್ಟಿಯನ್ನು ಪ್ರದಶರ್ಿಸಲು ಸೂಚಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬಿಸಿಎಂ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಗಳಿಗೆ ಭೇಟಿ ವಾರ್ಡನ್ಗಳಿಗೆ ಪ್ರತಿದಿನ ವಿದ್ಯಾರ್ಥಿಗಳ ಅಧ್ಯಯನ ಚಟುವಟಿಕೆಗಳ ಮೇಲೆ ಗಮನಹರಿಸಿ ತರಗತಿಗಳನ್ನು ನಡೆಸುವಂತೆ ಸೂಚಿಸಿದರು.