ನಿರಾಶ್ರಿತರಿಗೆ ಆಶ್ರಯ ಒದಗಿಸಲು ನಿರ್ಲಕ್ಷ್ಯ

KannadaprabhaNewsNetwork |  
Published : Jul 03, 2026, 01:30 AM IST
ದೊಡ್ಡಬಳ್ಳಾಪುರದಲ್ಲಿ ಆಶ್ರಯ ಯೋಜನೆಯಡಿ ನಿರಾಶ್ರಿತರಿಗೆ ನಿವೇಶನ, ಮನೆಗಳ ಹಂಚಿಕೆಗೆ ಕ್ರಮ ವಹಿಸಲು ಒತ್ತಾಯಿಸಿ ಕರವೇ ಪ್ರವೀಣ್‌ ಶೆಟ್ಟಿ ಬಣದ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ವಸತಿ ಯೋಜನೆ ಅಡಿ ಮಂಜೂರಾಗಿರುವ ಜಮೀನಿನಲ್ಲಿ ನಿವೇಶನಗಳ ರಚನೆ ಮತ್ತು ಬಡಾವಣೆ ಅಭಿವೃದ್ಧಿ, ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಿಸುವಲ್ಲಿ ಕೆಲವು ಗ್ರಾಮ ಪಂಚಾಯಿತಿಗಳ ನಿರ್ಲಕ್ಷ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ ಶೆಟ್ಟಿ ಬಣದ ತಾಲೂಕು ಘಟಕ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿ, ಶಾಸಕ ಧೀರಜ್‌ ಮುನಿರಾಜ್‌ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ವಸತಿ ಯೋಜನೆ ಅಡಿ ಮಂಜೂರಾಗಿರುವ ಜಮೀನಿನಲ್ಲಿ ನಿವೇಶನಗಳ ರಚನೆ ಮತ್ತು ಬಡಾವಣೆ ಅಭಿವೃದ್ಧಿ, ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಿಸುವಲ್ಲಿ ಕೆಲವು ಗ್ರಾಮ ಪಂಚಾಯಿತಿಗಳ ನಿರ್ಲಕ್ಷ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ ಶೆಟ್ಟಿ ಬಣದ ತಾಲೂಕು ಘಟಕ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿ, ಶಾಸಕ ಧೀರಜ್‌ ಮುನಿರಾಜ್‌ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಪ್ರತಿಭಟನಾಕಾರರು ತಾಲೂಕು ಪಂಚಾಯತಿ ಕಚೇರಿಯಲ್ಲಿ ಶಾಸಕ ಧೀರಜ್‌ ಮುನಿರಾಜ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಗ್ರಾಮೀಣ ಪ್ರದೇಶದ ನಿವೇಶನ ರಹಿತ ಬಡಜನರಿಗೆ ಆದ್ಯತೆಯ ಮೇರಿಗೆ ಶೀಘ್ರವಾಗಿ ಆಶ್ರಯ ವಸತಿ ಅಥವಾ ನಿವೇಶನ ಒದಗಿಸಬೇಕು. ಸರ್ಕಾರದ ಯೋಜನೆಗಳಡಿಯಲ್ಲಿ ಇತರ ತಾಲೂಕುಗಳಲ್ಲಿ ಈಗಾಗಲೇ ಜಮೀನು ಹಂಚಿಕೆ ಪ್ರಯತ್ನಗಳು ನಡೆದಿವೆ. ಆದರೆ ದೊಡ್ಡಬಳ್ಳಾಪುರದಲ್ಲಿ ಈ ಪ್ರಯತ್ನಗಳು ನಡೆದಿಲ್ಲ ಎಂದು ಆರೋಪಿಸಿದರು.

ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಆಹ್ವಾನಿಸಿ, ಶುಲ್ಕ ಕಟ್ಟಿಸಿಕೊಂಡಿದ್ದರೂ ಪ್ರಕ್ರಿಯೆ ಜಾರಿಯಾಗಿಲ್ಲ. ಕೆಲವೆಡೆ ಹಕ್ಕು ಪತ್ರ ಹಂಚಿಕೆ ಮಾಡಲು ಮೀನಮೇಷ ಎಣಿಸುತ್ತಿದ್ದಾರೆ. ರಾಜೀವ್‌ಗಾಂಧಿ ವಸತಿ ನಿಗಮದ ಅಡಿಯಲ್ಲಿ ಸರ್ಕಾರಿ ಜಾಗವನ್ನು ಗುರುತಿಸಿ ಬಡಾವಣೆಯಾಗಿ ಅಭಿವೃದ್ದಿ ಮಾಡಿ ನಿವೇಶನ ರಹಿತ ಫಲಾನುಭವಿಗಳನ್ನು ಆಯ್ಕೆ ಮಾಡಿ ಹಕ್ಕುಪತ್ರ ಹಂಚಿಕೆ ಮಾಡಲು ಮುಂದಾಗಬೇಕು. ಜಮೀನು ಮಂಜೂರಾಗದೇ ಇದ್ದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಗುರುತಿಸಿ ಮಂಜೂರಾತಿ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಕೆಲ ಗ್ರಾಮ ಪಂಚಾಯಿತಿ ಪಿಡಒಗಳ ನಿರ್ಲಕ್ಷ್ಯದಿಂದ ಸಮಸ್ಯೆ ಹೆಚ್ಚಾಗಿದೆ. ಕನಸವಾಡಿ, ಭಕ್ತರಹಳ್ಳಿ, ಹೊಸಹಳ್ಳಿ, ನಾಗಸಂದ್ರ, ಬಚ್ಚಹಳ್ಳಿ ಶಿವಪುರ, ಸೊಣ್ಣಪ್ಪನಹಳ್ಳಿ, ದೊಡ್ಡಹೆಜ್ಜಾಜಿ, ಮಧುರನಹೊಸಹಳ್ಳಿ, ಚಿಕ್ಕಬೆಳವಂಗಲ, ಪಿಂಡಕೂರು ತಿಮ್ಮನಹಳ್ಳಿ ಮತ್ತಿತರ ಕಡೆಗಳಲ್ಲಿ ಸರ್ಕಾರಿ ಜಾಗ ಇದ್ದು, ಪಹಣಿಗಳಲ್ಲಿ ಆಶ್ರಯ ನಿವೇಶನ ಯೋಜನೆ ಹಾಗೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ವರ್ಗಾಯಿಸಿರುವುದಾಗಿ ಮಾಹಿತಿ ಬರುತ್ತಿದೆ. ಆದರೆ ಅಭಿವೃದ್ದಿ ಪಡಿಸಿರುವ ದಾಖಲೆಗಳಿಲ್ಲ. ಕೂಡಲೇ ಈ ಬಗ್ಗೆ ಕ್ರಮ ವಹಿಸಿ ಅರ್ಹರಿಗೆ ವಸತಿ, ಸೂರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಎಸ್‌ಎಲ್‌ಎನ್‌ ವೇಣು, ಕಾರ್ಯಾಧ್ಯಕ್ಷ ಜೋಗಿಹಳ್ಳಿ ಅಮ್ಮು, ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಗರ ಬಶೀರ್, ಉಪಾಧ್ಯಕ್ಷ ಮಂಜುನಾಥ್, ಆನಂದ್ ಕುಮಾರ್, ಖಜಾಂಚಿ ಮುಕ್ಕೇನಹಳ್ಳಿ ರವಿ, ಕಾನೂನು ಸಲಹೆಗಾರ ಆನಂದ್, ಕಾರ್ಮಿಕ ಘಟಕದ ಅಧ್ಯಕ್ಷ ಮಹೇಶ್, ಮುನಿಕೃಷ್ಣ, ರವಿ, ಮುನೇಂದ್ರ, ಕೃಷ್ಣ, ನೂರುಲ್ಲಾ, ಸಿರಾಜ್, ಮಂಜುನಾಥ್, ಸೂರಿ, ಹೇಮಂತ್ ಮತ್ತಿತರರು ಭಾಗವಹಿಸಿದ್ದರು.

2ಕೆಡಿಬಿಪಿ1-

ದೊಡ್ಡಬಳ್ಳಾಪುರದಲ್ಲಿ ಆಶ್ರಯ ಯೋಜನೆಯಡಿ ನಿರಾಶ್ರಿತರಿಗೆ ನಿವೇಶನ, ಮನೆಗಳ ಹಂಚಿಕೆಗೆ ಕ್ರಮ ವಹಿಸಲು ಒತ್ತಾಯಿಸಿ ಕರವೇ ಪ್ರವೀಣ್‌ ಶೆಟ್ಟಿ ಬಣದ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆಗೊಂದು ಗ್ರಂಥಾಲಯ ಅನುಷ್ಠಾನ ಅರ್ಥಪೂರ್ಣವಾದದ್ದು: ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ
ರೈತರ ನೆರವಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಧಾವಿಸಲಿ: ಶಾಸಕ ಸಿಎನ್ ಬಾಲಕೃಷ್ಣ