ಮಳಖೇಡ ಎಪಿಎಂಸಿ ಉಪ ಮಾರುಕಟ್ಟೆ ಪ3ಾಂಗಣದಲ್ಲಿ ಟಿನ್ ಶೆಡ್ ನಿರ್ಮಾಣ ಕಾಮಗಾರಿಗೆ ಚಾಲನೆ
ಸೇಡಂ: ಜಾನುವಾರು ಸಂತೆಗೆ ಆಗಮಿಸುವ ರೈತರು ಮತ್ತು ಅವರ ಜಾನುವಾರುಗಳಿಗೆ ಮೂಲಸೌಕರ್ಯ ಒದಗಿಸುವುದು ಹಾಗೂ ಅವುಗಳ ಹಿತರಕ್ಷಣೆ ಮಾಡುವುದು ಸರ್ಕಾರದ ಆದ್ಯತೆ ಎಂದು ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಊಡಗಿ ಹೇಳಿದರು.
ತಾಲೂಕಿನ ಮಳಖೇಡ ನಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ವಾರ್ಷಿಕ ಕ್ರಿಯಾ ಯೋಜನೆಯಡಿ ಮಂಜೂರಾದ ೧ ಕೋಟಿ ೩೫ ಲಕ್ಷ ವೆಚ್ಚದಲ್ಲಿ ಜಾನುವಾರುಗಳಿಗೆ ಶೆಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.ಜಾನುವಾರು ಮಾರಾಟಕ್ಕೆ ದೂರದಿಂದ ಬರುವ ರೈತರು ಮಳೆ ಮತ್ತು ಬಿಸಿಲಿನಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು.
ರೈತರ ಈ ದೀರ್ಘಕಾಲದ ಸಮಸ್ಯೆಗೆ ಸ್ಪಂದಿಸಿ, ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಸುಸಜ್ಜಿತ ಜಾನುವಾರು ಶೆಡ್ ನಿರ್ಮಿಸಲು ಇಂದು ಚಾಲನೆ ನೀಡಲಾಗಿದ್ದು. ಎರಡು ಮೂರು ತಿಂಗಳ ಒಳಗಾಗಿ ಶೆಡ್ ನಿರ್ಮಾಣ ಕಾಮಗಾರಿ ಗುತ್ತಿಗೆದಾರರು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದರು.
ರೈತರ ಕಲ್ಯಾಣಕ್ಕಾಗಿ ಮತ್ತು ಕೃಷಿ ವಲಯದ ಸಬಲೀಕರಣಕ್ಕಾಗಿ ನಮ್ಮ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು, ಮಾರುಕಟ್ಟೆಗಳಲ್ಲಿ ಇನ್ನಷ್ಟು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಫೋಟೋ- ಬಸು ಊಡಗಿ