ಕನ್ನಡಪ್ರಭ ವಾರ್ತೆ ಸವದತ್ತಿ
ಮೂರನೇ ದಿನದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡ ವಿರುಪಾಕ್ಷ ಮಾಮನಿ ಮಾತನಾಡಿ, ಹಿಂದೂ ವಿದ್ಯಾರ್ಥಿನಿಯನ್ನು ಹಾಡಹಗಲೇ ಕಾಲೇಜು ಕ್ಯಾಂಪಸ್ ನಲ್ಲಿ ಹತ್ಯೆ ಮಾಡಿರುವ ಘಟನೆಯಿಂದ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೊಲೆ ಆರೋಪಿಗೆ ತಕ್ಷಣ ಶಿಕ್ಷೆಗೊಳಪಡಿಸಿದರೆ ಮಾತ್ರ ವಿದ್ಯಾರ್ಥಿಗಳಲ್ಲಿರುವ ಭಯ ಕಡಿಮೆಯಾಗಲು ಸಾಧ್ಯ. ಸರ್ಕಾರ ಕೂಡಲೇ ಪಾತಕಿಗಳನ್ನು ಮಟ್ಟಹಾಕುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.
ಜೆಡಿಎಸ್ ಮುಖಂಡ ಸೌರವ್ ಚೋಪ್ರಾ ಮಾತನಾಡಿ, ಸರ್ಕಾರ ಎಚ್ಚೆತ್ತುಕೊಂಡು ತಪ್ಪಿತಸ್ಥರಿಗೆ ತಕ್ಷಣ ಶಿಕ್ಷೆ ಕೊಡಬೇಕು. ಸರ್ಕಾರ ಪ್ರಕರಣವನ್ನು ತಿರುಚುವ ಪ್ರಯತ್ನ ಮಾಡುತ್ತಿರುವುದು ನೇಹಾ ಕುಟುಂಬಕ್ಕೆ ನೋವನ್ನುಂಟು ಮಾಡುತ್ತಿದೆ. ನೇಹಾ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ತಕ್ಷಣ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕೆಂದು ಆಗ್ರಹಿಸಿದರು.ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿ, ಕೊಲೆಗಾರರಿಗೆ ಪುಷ್ಟಿ ನೀಡುವಂತಹ ಹೇಳಿಕೆಗಳನ್ನು ಸರ್ಕಾರ ನೀಡುತ್ತಿದ್ದು, ಇದರಿಂದ ನೇಹಾ ಕುಟುಂಬಕ್ಕೆ ನೋವಾಗಿದೆ. ಪ್ರಕರಣವನ್ನು ಮುಚ್ಚಿ ಹಾಕುವ ನಿಟ್ಟಿನಲ್ಲಿ ವೈಯಕ್ತಿಕ ಕಾರಣದಿಂದ ಕೊಲೆ ನಡೆದಿದೆ ಎನ್ನುತ್ತಿರುವುದು ಯಾವ ನ್ಯಾಯ. ಪ್ರೀತಿ ವಿರೋಧಿಸಿದರೆ ಕೊಲೆ ಮಾಡುವಷ್ಟು ಕ್ರೂರತನ ಮೆರೆಯುವಂತವರಿಗೆ ಕಠಿಣ ಶಿಕ್ಷೆಯಾಗಬೇಕಿದ್ದು, ಸರ್ಕಾರ ಇಂತಹವರಿಗೆ ಸಹಕಾರ ನೀಡದೆ ಯುಪಿ ಮಾದರಿಯಲ್ಲಿ ಶಿಕ್ಷೆ ನೀಡುವಂತೆ ಆಗ್ರಹಿಸಿದರು.
ಪಂಚನಗೌಡ ದ್ಯಾಮನಗೌಡರ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸದ ಸಂಗತಿ ಎಂದರು.
ಸಂಸ್ಕಾರ ನೀಡದಿದ್ದಲ್ಲಿ ಇಂತಹ ದುಷ್ಕೃತ್ಯ: ಸ್ವಾಮೀಜಿ
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಏನೂ ಅರಿಯದ ಮುಗ್ದೆ ಹೆಣ್ಣು ಮಗಳನ್ನು ಭೀಕರವಾಗಿ ಕೊಲೆ ಮಾಡಿರುವುದು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಎಲ್ಲ ತಂದೆ ತಾಯಿಗಳು ಮಕ್ಕಳ ಮೇಲೆ ಕಾಳಜಿ ಮತ್ತು ಮಕ್ಕಳು ನಡೆಯ ಬಗ್ಗೆ ಗಮನ ಹರಿಸಬೇಕು ಎಂದರು. ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ವಿಧಿಸಲಿ ಮುಂದಿನ ದಿನದಲ್ಲಿ ಯಾವುದೇ ಸಮಾಜದ ವ್ಯಕ್ತಿ ಈ ರೀತಿ ಹೇಯ ಕೃತ್ಯ ಮಾಡದಂತೆ ಸರ್ಕಾರಗಳು ಸೂಕ್ತ ಕಾನೂನು ಕೈಗೊಳ್ಳಲಿ ಎಂದರು.