ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ: ವಿಚಾರಣೆ ಉಡುಪಿಯಲ್ಲೇ ಮುಂದುವರಿಸಲು ಹೈಕೋರ್ಟ್ ಆದೇಶ

KannadaprabhaNewsNetwork |  
Published : Sep 03, 2024, 01:46 AM ISTUpdated : Sep 03, 2024, 05:27 AM IST
ಚೌಗುಲೆ2 | Kannada Prabha

ಸಾರಾಂಶ

ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ವಿಚಾರಣೆಯನ್ನು ಉಡುಪಿಯಲ್ಲಿಯೇ ಮುಂದುವರಿಸಲು ಹೈಕೋರ್ಟ್ ಆದೇಶ ನೀಡಿದೆ. ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ತಡೆಯಾಜ್ಞೆ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

 ಉಡುಪಿ :  ಇಲ್ಲಿನ ನೇಜಾರು ಎಂಬಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣದ ವಿಚಾರಣೆಯನ್ನು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿಯೇ ಮುನ್ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.

ಆರೋಪಿ ಪ್ರವೀಣ್ ಚೌಗುಲೆ, ಉಡುಪಿಯಲ್ಲಿ ತನಗೆ ಪ್ರಾಣಾಪಾಯವಿದೆ, ಆದ್ದರಿಂದ ಪ್ರಕರಣದ ವಿಚಾರಣೆಯನ್ನು ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಬೆಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿ, ಉಡುಪಿ ಜಿಲ್ಲಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ತಂದಿದ್ದ.

ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಂತ್ರಸ್ತ ಕುಟುಂಬ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ತಡೆಯಾಜ್ಞೆಯನ್ನು ರದ್ದುಗೊಳಿಸಿ, ಪ್ರಕರಣವನ್ನು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಮುಂದುವರಿಸುವಂತೆ ನಿರ್ದೇಶನ ನೀಡಿದ್ದಾರೆ.

ಉಡುಪಿಯ ಹಿರಿಯಡ್ಕ ಜೈಲಿನಲ್ಲಿದ್ದ ಆರೋಪಿಗೆ ಜೀವಬೆದರಿಕೆಯ ಹಿನ್ನೆಲೆಯಲ್ಲಿ ಆತನನ್ನು ಬೆಂಗಳೂರು ಸೆಂಟ್ರಲ್ ಜೈಲಿಗೆ ಈಗಾಗಲೇ ವರ್ಗಾಯಿಸಲಾಗಿತ್ತು. ಅಲ್ಲಿಂದ ವಿಚಾರಣೆಗೆ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಜೀವಾಪಾಯದ ಸಾಧ್ಯತೆ ಇದೆ ಎಂದು ತಡೆಯಾಜ್ಞೆ ತಂದಿದ್ದ.ಇದು ತಪ್ಪು ಗ್ರಹಿಕೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ನ್ಯಾಯಾಧೀಶರು, ಉಡುಪಿ ನ್ಯಾಯಾಲಯದ ವಿಚಾರಣೆಯನ್ನು ತಡೆಹಿಡಿಯಲು ಆಗುವುದಿಲ್ಲ. ಆರೋಪಿಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಕೂಡ ಉಡುಪಿ ಜಿಲ್ಲಾ ನ್ಯಾಯಾಲಯದಿಂದಲೇ ವಿಚಾರಣೆ ನಡೆಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.ಆರೋಪಿ ಚೌಗುಲೆ ನ.12ರಂದು ನೇಜಾರನಲ್ಲಿ ಹಾಡುಹಗಲೇ ತಾಯಿ ಹಸೀನಾ, ಅವರ ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಅಸೀಮ್(14) ಎಂಬರನ್ನು ಕೊಲೆ ಮಾಡಿದ್ದ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!