ನೆಲಮಂಗಲ ಬಿಜೆಪಿಯಿಂದ ಧರ್ಮಸ್ಥಳ ಚಲೋ

KannadaprabhaNewsNetwork |  
Published : Aug 30, 2025, 01:00 AM IST
ಪೊಟೊ-29ಕೆಎನ್ಎಲ್ ಎಮ್ 1-ನೆಲಮಂಗಲ ನಗರದ ಸುಭಾಷ್‌ನಗರದ ಶ್ರೀ ಸಿದ್ಧರಾಮೇಶ್ವರ ಭವನದಲ್ಲಿ ಕ್ಷೇತ್ರ ಬಿಜೆಪಿ ಪಕ್ಷದಿಂದ  ಧರ್ಮಸ್ಥಳ ಚಲೋ ಕಾರ್ಯಕ್ರಮ ಹಿನ್ನಲೆ  ಕಾರ್ಯಕರ್ತರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ತಾಲೂಕು ಅದ್ಯಕ್ಷ ಜಗದೀಶ್‌ ಚೌಧರಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ನೆಲಮಂಗಲ: ಧರ್ಮಸ್ಥಳ ಕ್ಷೇತ್ರದ ಮೇಲಿನ ಅಪಪ್ರಚಾರ ಖಂಡಿಸಿ ಬಿಜೆಪಿ ಪಕ್ಷದಿಂದ ಧರ್ಮಸ್ಥಳ ಚಲೋ ರ್ಯಾಲಿಯಲ್ಲಿ 300ಕ್ಕೂ ಹೆಚ್ಚು ಕಾರುಗಳಲ್ಲಿ ಮುಖಂಡರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಮದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ತಿಳಿಸಿದರು.

ನೆಲಮಂಗಲ: ಧರ್ಮಸ್ಥಳ ಕ್ಷೇತ್ರದ ಮೇಲಿನ ಅಪಪ್ರಚಾರ ಖಂಡಿಸಿ ಬಿಜೆಪಿ ಪಕ್ಷದಿಂದ ಧರ್ಮಸ್ಥಳ ಚಲೋ ರ್ಯಾಲಿಯಲ್ಲಿ 300ಕ್ಕೂ ಹೆಚ್ಚು ಕಾರುಗಳಲ್ಲಿ ಮುಖಂಡರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಮದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ತಿಳಿಸಿದರು.

ನಗರದಲ್ಲಿ ಬಿಜೆಪಿ ಪಕ್ಷ ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಹಮ್ಮಿಕೊಂಡಿರುವ ಧರ್ಮಸ್ಥಳ ಚಲೋ ಪ್ರಯುಕ್ತ ಏರ್ಪಡಿಸಿದ್ದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಕಿಡಿಗೇಡಿಗಳು ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ. ಜತೆಗೆ ಧರ್ಮಸ್ಥಳದ ಪಾವಿತ್ರ್ಯಕ್ಕೆ ಕಳಂಕ ಹಚ್ಚಿ, ಹಿಂದೂಗಳ ಭಾವನೆಗಳಿಗೆ ಧಕ್ಕೆ ತರಲು ಷಡ್ಯಂತ್ರ ರೂಪಿಸಲಾಗಿದೆ. ಸಮಾಜ ವಿರೋಧಿ, ದೇಶ ವಿರೋಧಿಗಳ ಜಾಲ ಪತ್ತೆಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಆದ್ದರಿಂದ ಆ.31ರಂದು ಧರ್ಮಸ್ಥಳ ಚಲೋ ಕಾರು ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಅನಾಮಿಕನಿಗೆ ಗಲ್ಲು ಶಿಕ್ಷೆ: ಯಾರೋ ಅನಾಮಿಕ ನೀಡಿದ ದೂರು ಆಧರಿಸಿ, ತನಿಖೆ ಕೈಗೊಂಡು ಧರ್ಮಸ್ಥಳಕ್ಕೆ ಕಳಂಕ ಹಚ್ಚುವ ಕೆಲಸ ಮಾಡಲಾಗಿದೆ. ಈಗಾಗಲೇ ಅನಾಮಿಕ ಯಾರೆಂದು ಬಹಿರಂಗ ಪಡಿಸಲಾಗಿದೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಅನಾಮಿಕ ಚಿನ್ನಯ್ಯನಿಗೆ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕ ಎಂ.ವಿ.ನಾಗರಾಜು ಮಾತನಾಡಿ, ಧರ್ಮಸ್ಥಳ ಕೇವಲ ಒಂದು ಸ್ಥಳವಲ್ಲ ಕೋಟ್ಯಂತರ ಭಕ್ತರ ಪುಣ್ಯಕ್ಷೇತ್ರ. ಮಂಜುನಾಥಸ್ವಾಮಿ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ಅವಹೇಳನಕಾರಿ ಹಾಗೂ ಅಪಪ್ರಚಾರ ನಡೆಸುತ್ತಿದ್ದು ಬೇಸರದ ಸಂಗತಿ. ಧರ್ಮಾಧಿಕಾರಿಗಳಿಗೆ ಶಕ್ತಿ ತುಂಬಲು ಬಿಜೆಪಿ ಪಕ್ಷದಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಮುಖಂಡ ಸಪ್ತಗಿರಿ ಶಂಕರನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್.ಮಲ್ಲಯ್ಯ, ರಾಹುಲ್‌ಗೌಡ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬೃಂಗೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ್, ಎಸ್ಟಿಮೋರ್ಚಾ ಅಧ್ಯಕ್ಷ ಕೆಂಪರಾಮಯ್ಯ, ಒಬಿಸಿ ಮೋರ್ಚಾ ಅಧ್ಯಕ್ಷ ಲೋಕೇಶ್, ಯುವ ಮೋರ್ಚಾ ಅಧ್ಯಕ್ಷ ಮಹೇಶ್, ನಗರಸಭೆ ಹೆಚ್ಚುವರಿ ಸದಸ್ಯ ಮುನಿರಾಜು, ಕೃಪಾನಂದ್, ಅಂಜನಮೂರ್ತಿ, ರಾಮಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ರವಿ, ಮುಖಂಡ ಅಶ್ವತ್ಥ್, ಉಮೇಶ್, ರಮೇಶ್, ಅರುಣ್‌ಗೌಡ, ಡಿ.ಸಿದ್ದರಾಜು, ಗಿರೀಶ್, ಚಂದ್ರಶೆಟ್ಟಿ, ರಾಜಮ್ಮಪ್ರಕಾಶ್, ಸುಬ್ರಹ್ಮಣಿ, ಶೀಲಾ, ಸುಮ, ಶಾಂತಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ಪೊಟೊ-29ಕೆಎನ್ಎಲ್ ಎಮ್ 1-

ನೆಲಮಂಗಲದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಜಗದೀಶ್‌ ಚೌಧರಿ ಧರ್ಮಸ್ಥಳ ಚಲೋ ಕಾರ್ಯಕ್ರಮ ಕುರಿತು ಮುಖಂಡರ ಸಭೆಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು