ನೆಟ್ಟಾರು ಹತ್ಯೆ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

KannadaprabhaNewsNetwork |  
Published : Aug 03, 2024, 12:37 AM IST
11 | Kannada Prabha

ಸಾರಾಂಶ

ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ಮುಂದುವರಿದಿದೆ.

ಕನ್ನಡಪ್ರಭ ವಾರ್ತೆ ಮಂಗಳೂರುಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ ಇಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಶುಕ್ರವಾರ ಆರೋಪಪಟ್ಟಿ ಸಲ್ಲಿಸಿದೆ. ಮುಸ್ತಫಾ ಪೈಚಾರ್‌ ಹಾಗೂ ರಿಯಾಜ್‌ ಎಚ್‌ವೈ ಈ ಆರೋಪಿಗಳು.ಬಿಜೆಪಿ ಯುವಮೋರ್ಚಾ ಜಿಲ್ಲಾ ಸಮಿತಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು 2022ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹರಿತವಾದ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು 27.07.2022ರಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎನ್ಐಎ ಪ್ರಕರಣ ಕೈಗೆತ್ತಿಕೊಂಡ ಬಳಿಕ 2022ರ ಆ.4ರಂದು ಪ್ರಕರಣವನ್ನು ಮರು ದಾಖಲಿಸಿತ್ತು.ನೆಟ್ಟಾರು ಕೊಲೆ ಪ್ರಕರಣದಲ್ಲಿ ಇದುವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿ ಮುಸ್ತಫಾ ಪೈಚಾರ್ ನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ 10.05.2024ರಂದು ಮನ್ಸೂರ್ ಪಾಷಾ ಎಂಬಾತನ ಜತೆ ಬಂಧಿಸಲಾಗಿತ್ತು. ಮುಸ್ತಫಾ ಪೈಚಾರ್ ಪ್ರಕರಣದ ಪ್ರಮುಖ ಸಂಚುಕೋರನಾಗಿದ್ದು, ರಾಜ್ಯದಲ್ಲಿ ಪಿಎಫ್‌ಐ ಸೇವಾ ತಂಡದ ಮಾಸ್ಟರ್ ಟ್ರೈನರ್ ಆಗಿದ್ದ.ತನಿಖೆ ವೇಳೆ ರಿಯಾಜ್ ಎಚ್.ವೈ. ಎಂಬ ಮತ್ತೊಬ್ಬ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದು ತಿಳಿದುಬಂದಿತ್ತು. ಈತ ಭಾರತದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ 03.06.2024ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ ಐಎ ಬಂಧಿಸಿತ್ತು. ಪ್ರಕರಣದಲ್ಲಿ ಪ್ರಮುಖ ಸಂಚುಕೋರನಿಗೆ ಇಬ್ಬರು ಆಶ್ರಯ ನೀಡಿದ್ದಕ್ಕಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 212 ಮತ್ತು ಯುಎ (ಪಿ) ಆಕ್ಟ್‌ನ ಸೆಕ್ಷನ್ 19ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ಮುಂದುವರಿದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ