ಗದಗ: ನಗರದ ಹೋಟೆಲ್ ಒಡೆಯರ ಸಂಘದ ನೂತನ ಕಟ್ಟಡದ ಉದ್ಘಾಟನೆ ಏ. 10ರಂದು ಬೆಳಗ್ಗೆ 10.30ಕ್ಕೆ ನೂತನ ಬಸ್ ನಿಲ್ದಾಣದ ಹತ್ತಿರವಿರುವ ಸ್ವರಾಜ್ ಟ್ರ್ಯಾಕ್ಟರ್ ಶೋರೂಮ್ ಹಿಂದುಗಡೆ ಜರುಗಲಿದೆ ಎಂದು ಹೋಟೆಲ್ ಒಡೆಯರ ಸಂಘದ ಜಿಲ್ಲಾಧ್ಯಕ್ಷ ಎಚ್. ವಿಶ್ವನಾಥ ಶೆಟ್ಟಿ ತಿಳಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಾಕ್ಷ ಡಿ.ಆರ್. ಪಾಟೀಲ, ರಾಜ್ಯ ಹೋಟೆಲ್ಗಳ ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ಆಗಮಿಸುವರು.
ಈ ವೇಳೆ ಸುಧಾಕರ ಶೆಟ್ಟಿ, ಜಯಪಾಲ ಶೆಟ್ಟಿ, ಪಿ.ವಿ. ಹೆಗಡೆ, ಕೆ.ಎ. ಸುಧಾಕರರಾವ್, ಬಿ. ರಾಜೀವ ಶೆಟ್ಟಿ, ಯಲ್ಲಪ್ಪ ಬಾವಿಕಟ್ಟಿ, ಉಮೇಶ ಶಾನಬಾಗ ಸೇರಿದಂತೆ ಮುಂತಾದವರು ಇದ್ದರು.
ರೋಣ: ನಮ್ಮ ಜನಪದರ ಶ್ರಮದ ಹಿನ್ನೆಲೆ ಹುಟ್ಟಿಕೊಂಡ ಚುಟುಕು ಸಾಹಿತ್ಯವನ್ನು ಉಳಿಸಿ ಬೆಳೆಸಬೇಕು. ಆ ಹಿನ್ನೆಲೆ ಶಾಸಕ ಜಿ.ಎಸ್. ಪಾಟೀಲರ ಜನ್ಮದಿನದ ಪ್ರಯುಕ್ತ ತಾಲೂಕು ಮಟ್ಟದ ಚುಟುಕು ಸಾಹಿತ್ಯ ಸಂಭ್ರಮವನ್ನು ಏ. 11ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಚುಟುಕ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರಯ್ಯ ಸೋಮನಕಟ್ಟಿಮಠ ತಿಳಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುಟುಕು ಸಾಹಿತ್ಯ ಸಂಭ್ರಮದಲ್ಲಿ ಕವನ ಸಂಕಲನ ಲೋಕಾರ್ಪಣೆ, ಕವಿಗೋಷ್ಠಿ, ಗಾನಸುಧೆ, ಸಂಸ್ಕಾರದ ಉಪನ್ಯಾಸ, ಗೌರವ ಸನ್ಮಾನ, ಸಾಹಿತ್ಯ ಜಾನಪದ ಕಲೆಯ ಅಳಿವು, ಉಳಿವು ಕುರಿತು ಹಿರಿಯ ಸಾಹಿತಿಗಳಿಂದ ಕಾರ್ಯಕ್ರಮಗಳು ನಡೆಯಲಿವೆ. ಸಾಹಿತ್ಯ ಆಸಕ್ತರು, ಸಾಹಿತಿಗಳು, ಸಾಹಿತ್ಯಾಭಿಮಾನಿಗಳು ಸಾಹಿತ್ಯ ಸಂಭ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.
ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೋತಬಾಳ ಅರುಣೋದಯ ಜಾನಪದ ಕಲಾತಂಡ, ರಾಜಶೇಖರ ಹಿರೇಮಠ ಬೆಳಕು ಮತ್ತು ಜೀವನಜ್ಯೋತಿ ಕಲಾತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ ಎಂದರು.ಸುದ್ದಿಗೋಷ್ಠಿಯಲ್ಲಿ ಚುಟುಕು ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಉಪಸ್ಥಿತರಿದ್ದರು.